‘ಇಸ್ರೇಲ್ ಜೊತೆಗೆ ಯಾವುದೇ ಕದನ ವಿರಾಮ ಏರ್ಪಟ್ಟಿಲ್ಲ’- ಇರಾನ್ ವಿದೇಶಾಂಗ ಸಚಿವ ಸ್ಪಷ್ಟನೆ

WhatsApp
Telegram
Facebook
Twitter
LinkedIn

ಟೆಹ್ರಾನ್ : ಇಸ್ರೇಲ್ ಜೊತೆಗೆ ಯಾವುದೇ ಕದನ ವಿರಾಮ ಏರ್ಪಟ್ಟಿಲ್ಲ ಎಂದು ಇರಾನ್‌ನ ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್ಚಿ ತಿಳಿಸಿದ್ದಾರೆ.

ಉಭಯ ದೇಶಗಳು ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಅಮೆರಿಕ ಅಧ್ಯಕ್ಷ ಶ್ವೇತಭವನ ಘೋಷಿಸಿದ ಬೆನ್ನಲ್ಲೇ, ಅಬ್ಬಾಸ್ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಪೋಸ್ಟ್ ಮಾಡಿದ್ದಾರೆ.

‘ಇಸ್ರೇಲ್ ದಾಳಿ ನಿಲ್ಲಿಸಿದ ಕೂಡಲೇ ನಾವು ನಿಲ್ಲಿಸುತ್ತೇವೆ. ಯುದ್ಧ ಪ್ರಾರಂಭಿಸಿದ್ದು ಇಸ್ರೇಲ್, ನಾವಲ್ಲ ಎಂದು ನಾವು ಹಲವು ಬಾರಿ ಸ್ಪಷ್ಟಪಡಿಸಿದ್ದೇವೆ. ಈವರೆಗೂ ಕದನ ವಿರಾಮ ಅಥವಾ ಸೇನಾ ಕಾರ್ಯಾಚರಣೆ ಸ್ಥಗಿತಗೊಳಿಸುವ ಬಗ್ಗೆ ಯಾವುದೇ ಒಪ್ಪಂದ ನಡೆದಿಲ್ಲ’ ಎಂದು ಅವರು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

‘ಇರಾನ್ ಜನತೆ ಮೇಲೆ ಇಸ್ರೇಲ್ ಆಡಳಿತವು ನಡೆಸುತ್ತಿರುವ ಕಾನೂನು ಬಾಹಿರ ಆಕ್ರಮಣವನ್ನು ಟೆಹರಾನ್ ಸಮಯ ಬೆಳಿಗ್ಗೆ 4 ಗಂಟೆಯೊಳಗೆ ನಿಲ್ಲಿಸಿದರೆ, ಅವರಿಗೆ ಪ್ರತ್ಯುತ್ತರ ನೀಡುವ ಯಾವುದೇ ಉದ್ದೇಶ ನಮಗಿಲ್ಲ. ನಮ್ಮ ಮಿಲಿಟರಿ ಕಾರ್ಯಾಚರಣೆಗಳನ್ನು ನಿಲ್ಲಿಸುವ ಬಗ್ಗೆ ಅಂತಿಮ ನಿರ್ಧಾರವನ್ನು ನಂತರ ತೆಗೆದುಕೊಳ್ಳಲಾಗುವುದು’ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon