ಬೆಂಗಳೂರು: ಮುಂಗಾರು ಅಬ್ಬರ ಮತ್ತೆ ಚುರುಕಾಗಿದೆ. ರಾಜ್ಯದಾದ್ಯಂತ ವಿವಿಧ ಕಡೆ ಬಾರಿ ಪ್ರಮಾಣದಲ್ಲಿ ಮಳೆಯಾಗಿದ್ದು, ಇನ್ನು ಮೂರ್ನಾಲ್ಕು ದಿನ ಭಾರಿ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಮುಂದಿನ ಎರಡು ದಿನಗಳ ಕಾಲ ಆರೆಂಜ್ ಅಲರ್ಟ್ ನೀಡಿದ್ದು, ನಂತರದ ಎರಡು ದಿನ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಬೆಳಗಾವಿ, ಬಾಗಲಕೋಟೆ, ಧಾರವಾಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲೂ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದ್ದು, ಈ ಜಿಲ್ಲೆಗಳಿಗೆ ಮುಂದಿನ ಮೂರು ದಿನ ಯೆಲ್ಲೋ ಅಲರ್ಟ್ ನೀಡಲಾಗಿದೆ.