ಲಕ್ನೋ: ವಾರ್ಷಿಕವಾಗಿ ನಡೆಯುವ ಕನ್ವರ್ ಯಾತ್ರೆಗೂ ಮೊದಲು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ್ ಸರ್ಕಾರ ಮಹತ್ವದ ಆದೇಶವೊಂದನ್ನು ಹೊರಡಿಸಿದೆ.
ಕನ್ವರ್ ಯಾತ್ರೆಯ ದಾರಿಯಲ್ಲಿ ಮದ್ಯ, ಮಾಂಸ ಮಾರಾಟವಾಗದಂತೆ ಮತ್ತು ಅಂಗಡಿ ಮುಂಗಟ್ಟುಗಳ ಮುಂದೆ ತಮ್ಮ ಹೆಸರನ್ನು ಕಡ್ಡಾಯವಾಗಿ ಪ್ರದರ್ಶಿಸುವಂತೆ ಸೂಚಿಸಲಾಗಿದೆ. ಜೊತೆಗೆ ದಾರಿ ಮಧ್ಯೆ ಭಕ್ತರ ಧಾರ್ಮಿಕ ಭಾವನೆಯನ್ನು ಗೌರವಿಸುವಂತೆ, ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ತಿಳಿಸಲಾಗಿದೆ.
ಆದರೆ ಯಾತ್ರೆಯ ನಡುವೆ ಭಕ್ತರ ಮಧ್ಯೆ ಸಮಾಜಘಾತುಕ ಶಕ್ತಿಗಳು ಶಾಂತಿ ಕದಡುವ ಸಾಧ್ಯತೆಗಳಿದ್ದು, ಎಚ್ಚರದಿಂದಿರಲು ಸೂಚಿಸಲಾಗಿದೆ. ಧಾರ್ಮಿಕ ಮೆರವಣಿಗೆಗೆ ಭದ್ರತೆ ಒದಗಿಸುವಂತೆಯೂ ಸರ್ಕಾರ ಆದೇಶದಲ್ಲಿ ತಿಳಿಸಿದೆ.