ಮೈಸೂರು : ಸೆಪ್ಟೆಂಬರ್ನಲ್ಲಿ ಕ್ರಾಂತಿ ನಡೆಯಲಿದೆ ಎಂದು ಹೇಳಲಾಗುತ್ತಿರುವ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ನಾನು ಮತ್ತು ಡಿಕೆ ಶಿವಕುಮಾರ್ ಒಟ್ಟಾಗಿಯೇ ಇದ್ದೇವೆ. ನಮ್ಮ ಸರ್ಕಾರ ಬಂಡೆ ರೀತಿ 5 ವರ್ಷ ಇರಲಿದೆ ಎಂದು ಹೇಳಿದ್ದಾರೆ.
ಸುದ್ದಿಗಾರರ ಜೊತೆ ಡಿಕೆಶಿ ಕೈ ಹಿಡಿದು ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ‘ನಮ್ಮಿಬ್ಬರ ಮಧ್ಯೆ ತಂದಿಡುವ ಪ್ರಯತ್ನವನ್ನು ಮಾಡಿದರೂ ಅದು ಆಗುವುದಿಲ್ಲ. ನಮ್ಮ ಬಗ್ಗೆ ಮಾತನಾಡುವ ಶ್ರೀರಾಮಲು ಎಷ್ಟು ಚುನಾವಣೆ ಸೋತಿದ್ದಾನೆ ಹೇಳಿ. ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸಿಮರು’ ಎಂದು ತಿಳಿಸಿದ್ದಾರೆ.
ನಾನೇ ದಸರಾ ಉದ್ಘಾಟನೆ ಮಾಡುತ್ತೇನೆ ಎಂದು ಮಾಧ್ಯಮದವರಿಗೆ ಅನಿಸಿದೆ ಅಲ್ವಾ. ಅದೇ ಸತ್ಯ ಎಂದು ಹೇಳಿರುವ ಅವರು, ಈ ಬಾರಿ ಸಿದ್ದರಾಮಯ್ಯ ದಸರಾ ಉದ್ಘಾಟನೆ ಮಾಡುವುದಿಲ್ಲ ಎಂದಿದ್ದ ಅಶೋಕ್ಗೆ ತಿರುಗೇಟು ನೀಡಿದ್ದಾರೆ.
ಸುರ್ಜೇವಾಲಾ ಅವರು ಈ ರಾಜ್ಯದ ಕಾಂಗ್ರೆಸ್ ಉಸ್ತುವಾರಿ. ಕಾಂಗ್ರೆಸ್ ಶಾಸಕರ ಕಷ್ಟ ಸುಖ ಕೇಳುತ್ತಾರೆ. ಪಕ್ಷ ಸಂಘಟನೆ ಬಗ್ಗೆ ಸಲಹೆ ಕೊಡುತ್ತಾರೆ. ಅದು ಅವರ ಕೆಲಸ, ಇದರಲ್ಲಿ ಬೇರೆ ಏನು ವಿಶೇಷ ಇಲ್ಲ ಎಂದರು.