ನವದೆಹಲಿ : ಇಂಡಿಯಾ ಒಕ್ಕೂಟದಿಂದ ಆಮ್ ಆದ್ಮಿ ಪಕ್ಷ ಹೊರ ಬಂದಿದೆ. ಆಪ್ ಇಂಡಿಯಾ ಒಕ್ಕೂಟದ ಭಾಗವಾಗಿಲ್ಲ. ಇದನ್ನು ನಮ್ಮ ನಾಯಕ ಅರವಿಂದ್ ಕೇಜ್ರಿವಾಲ್ ಸ್ಪಷ್ಟಪಡಿಸಿದ್ದಾರೆ ಎಂದು ಎಎಪಿ ನಾಯಕ ಸಂಜಯ್ ಸಿಂಗ್ ಮಾಹಿತಿ ನೀಡಿದ್ದಾರೆ.
ಈ ಹಿಂದೆ 2024ರ ಲೋಕಸಭಾ ಚುನಾವಣೆಯಲ್ಲಿ ದೆಹಲಿಯಲ್ಲಿ ಎಎಪಿ ಮತ್ತು ಕಾಂಗ್ರೆಸ್ ಭಾರತ ಮೈತ್ರಿಕೂಟದ ಭಾಗವಾಗಿ ಸ್ಪರ್ಧಿಸಿವೆ. ಆದರೆ, ಹರಿಯಾಣ ಮತ್ತು ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಎರಡೂ ಪಕ್ಷಗಳು ಪ್ರತ್ಯೇಕವಾಗಿ ಸ್ಪರ್ಧಿಸಿದವು.
ಇಂದು ಮುಂಗಾರು ಅಧಿವೇಶನ ಹಿನ್ನೆಲೆ ಸಂಜೆ ಏಳು ಗಂಟೆಗೆ ಇಂಡಿಯಾ ಒಕ್ಕೂಟದ ಸಭೆ ಕರೆಯಲಾಗಿತ್ತು. ಸಭೆಗೂ ಮುನ್ನ ಇಂಡಿಯಾ ಒಕ್ಕೂಟಕ್ಕೆ ಆಮ್ ಆದ್ಮಿ ಪಕ್ಷ ಶಾಕ್ ನೀಡಿದೆ.