ಧರ್ಮಸ್ಥಳ ಪ್ರಕರಣ: ‘ಸುಳ್ಳು ಸುದ್ದಿ ಹರಡಿದವರ ವಿರುದ್ಧ ಕಠಿಣ ಕ್ರಮ’- ಪರಮೇಶ್ವರ್

WhatsApp
Telegram
Facebook
Twitter
LinkedIn

ಬೆಂಗಳೂರು : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಳು ಸುದ್ದಿ ಹರಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಜಿ. ಪರಮೇಶ್ವರ್ ಎಚ್ಚರಿಸಿದ್ದಾರೆ.

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿರುವ ಉಹಾಪೋಹದ ಸುದ್ದಿಗಳ ಬಗ್ಗೆ ಮಾತನಾಡಿದ ಅವರು, “ಪ್ರಚೋದನಕಾರಿ ವಿಷಯಗಳನ್ನು ಪೋಸ್ಟ್ ಮಾಡುವವರ ವಿರುದ್ಧ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದು. ಪ್ರಕರಣಕ್ಕೆ ಸಂಬಂಧ ಇಲ್ಲದ ಇರುವ ಇಲ್ಲಸಲ್ಲದ ಪೋಸ್ಟ್ ಹಾಕಿದವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ” ಎಂದು ತಿಳಿಸಿದರು.

“ಹೇಟ್ ಸ್ಪೀಚ್ ಬಗ್ಗೆ ಕಾನೂನು ಮಾಡಿದ ನಂತರ ದಕ್ಷಿಣ ಕನ್ನಡದಲ್ಲಿ ದ್ವೇಷ ಭಾಷಣದ ಈಗ ಕಡಿಮೆಯಾಗಿದೆ. ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರಾದರೂ ದ್ವೇಷದ ಪೋಸ್ಟ್ ಹಾಕಿದರೆ ಅವರನ್ನು ಬಿಡುವ ಪ್ರಶ್ನೆಯೇ ಇಲ್ಲ. ಕ್ರಮ ಕೈಗೊಳ್ಳುತ್ತೇವೆ” ಎಂದು ಹೇಳಿದರು.

“ಧರ್ಮಸ್ಥಳ ಪ್ರಕರಣ ತನಿಖೆ ನಡೆಯುತ್ತಿದೆ. ತನಿಖಾ ತಂಡ ವರದಿ ಸಲ್ಲಿಸುವವರೆಗೆ ನಾವು ಈ ಬಗ್ಗೆ ಯಾವುದೇ ಹೇಳಿಕೆ ನೀಡುವುದಿಲ್ಲ” ಎಂದರು.

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon