ತಮಿಳುನಾಡಿನಲ್ಲಿ ತನ್ನನ್ನು ಕೆಲವು ವ್ಯಕ್ತಿಗಳು ಭೇಟಿ ಮಾಡಿದ್ದಾರೆಂದು ಮುಸುಕುಧಾರಿ ಹೇಳಿಲ್ಲ : ಎಸ್‌ಐಟಿ ಸ್ಪಷ್ಟನೆ

WhatsApp
Telegram
Facebook
Twitter
LinkedIn

ಮಂಗಳೂರು: ತಮಿಳುನಾಡಿನಲ್ಲಿದ್ದ ವೇಳೆ ಗುಂಪೊಂದು ತನ್ನನ್ನು ಸಂಪರ್ಕಿಸಿತ್ತು ಎಂದು ದೂರುದಾರ ಮುಸುಕುಧಾರಿ ವ್ಯಕ್ತಿ ಹೇಳಿಲ್ಲ ಎಂದು ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

2014ರ ನಂತರ ತಮಿಳುನಾಡಿನಲ್ಲಿದ್ದೆ. 2023ರಲ್ಲಿ ಒಂದು ಗುಂಪು ನನ್ನನ್ನು ಸಂಪರ್ಕಿಸಿತ್ತು. ಧರ್ಮಸ್ಥಳದಲ್ಲಿ ಶವ ಹೂತಿರುವ ಬಗ್ಗೆ ನನ್ನನ್ನು ಕೇಳಿತ್ತು. ನಾನು ಕಾನೂನು ಪ್ರಕಾರವೇ ಶವಗಳನ್ನು ಹೂತಿರುವುದಾಗಿ ಹೇಳಿದ್ದೆ. ಆದರೆ ಈ ಗುಂಪು ತಪ್ಪು ಹೇಳಿಕೆ ನೀಡುವಂತೆ ಒತ್ತಡ ಹಾಕಿತ್ತು ಎಂದು ಸಾಕ್ಷಿ ಹಾಗೂ ದೂರುದಾರ ಹೇಳಿಕೆ ನೀಡಿದ್ದಾನೆಂಬ ಸುದ್ದಿ ಸೋಮವಾರ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿ ಸಾಕಷ್ಟು ಕೋಲಾಹಲ ಸೃಷ್ಟಿಸಿತ್ತು.

ಈ ಸೋಷಿಯಲ್‌ ಮೀಡಿಯಾ ವರದಿಗಳನ್ನು ಎಸ್ಐಟಿ ನಿರಾಕರಿಸಿದ್ದು, ವಿಚಾರಣೆ ವೇಳೆ ಸಾಕ್ಷಿ ದೂರುದಾರ ಅಂತಹ ಹೇಳಿಕೆ ನೀಡಿಲ್ಲ ಎಂದು ಸ್ಪಷ್ಟಪಡಿಸಿದೆ. ದೂರುದಾರನ ಅಂತಹ ಯಾವುದೇ ಹೇಳಿಕೆ ನಮಗೆ ಸಿಕ್ಕಿಲ್ಲ. ಪ್ರಸ್ತುತ, ನಾವು ಅವರನ್ನು ದೂರುದಾರ ಎಂದು ಪರಿಗಣಿಸುತ್ತೇವೆ. ಸೆಕ್ಷನ್ 164ರ ಅಡಿಯಲ್ಲಿ ಅವರು ನೀಡಿರುವ ಹೇಳಿಕೆಯನ್ನು ದಾಖಲಿಸಿಕೊಳ್ಳುವುದನ್ನು ಮುಂದುವರಿಸುತ್ತೇವೆ ಎಂದು ಎಸ್‌ಐಟಿ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಮೊದಲು ದೂರುದಾರ ವ್ಯಕ್ತಿ ನೀಡಿರುವ ಹೇಳಿಕೆಗಳ ಸತ್ಯಾಸತ್ಯತೆಯನ್ನು ಪರಿಶೀಲಿಸಬೇಕಾಗಿದೆ. ದೂರುದಾರರೊಂದಿಗೆ ಕೆಲಸ ಮಾಡಿದ ಇತರ ವ್ಯಕ್ತಿಗಳು, ಆಗಿನ ಗ್ರಾಮ ಪಂಚಾಯತ್ ಅಧಿಕಾರಿಗಳು ಮತ್ತು ಇನ್ನೂ ಜೀವಂತವಾಗಿರುವ ಸಿಬ್ಬಂದಿ, ದೂರುದಾರರು ಉಲ್ಲೇಖಿಸಿದ 1994 ಮತ್ತು 2014ರ ನಡುವೆ ಕೆಲಸ ಮಾಡುತ್ತಿದ್ದ ಪೊಲೀಸ್ ಸಿಬ್ಬಂದಿಯ ಮಾಹಿತಿಯನ್ನು ಸಂಗ್ರಹಿಸುತ್ತಿದ್ದೇವೆಂದು ತಿಳಿಸಿದರು. ಇದೇ ವೇಳೆ ಎಸ್‌ಐಟಿ ಯೂಟ್ಯೂಬರ್‌ಗಳಿಗೆ ನೋಟಿಸ್ ನೀಡಿದೆ ಎಂಬ ವರದಿಗಳನ್ನೂ ಅಧಿಕಾರಿಗಳು ನಿರಾಕರಿಸಿದ್ದಾರೆ. ನಾವು ಯಾವುದೇ ನೋಟಿಸ್ ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

1994-2014ರ ಅವಧಿಯಲ್ಲಿ ಕೆಲಸ ಮಾಡಿದ ಕೆಲವು ವ್ಯಕ್ತಿಗಳ ಹೇಳಿಕೆಗಳನ್ನು ದಾಖಲಿಸಿಕೊಳ್ಳಲು ಕೆಲವರಿಗೆ ಸಮನ್ಸ್ ನೀಡಲಾಗಿದೆ ಎಂದು ಎಸ್‌ಐಟಿ ಮೂಲಗಳು ತಿಳಿಸಿವೆ. ಮಂಗಳವಾರ ಸಾಕ್ಷಿ ದೂರುದಾರ ಮತ್ತು ಇತರ ಸಾಕ್ಷಿಗಳನ್ನು ಎಸ್ಐಟಿ ವಿಚಾರಣೆಗೊಳಪಡಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ದೂರುದಾರರು ಹೊರತೆಗೆದಿದ್ದಾನೆಂದು ಹೇಳಲಾಗುವ ತಲೆಬುರುಡೆ, ಇತರ ಸ್ಥಳದ ಬಗ್ಗೆಯೂ ಮುಂದಿನ ದಿನಗಳಲ್ಲಿ ಪ್ರಶ್ನಿಸಲಾಗುವುದು ಎಂದು ಎಸ್‌ಐಟಿ ಮೂಲಗಳು ತಿಳಿಸಿವೆ.

ಈ ನಡುವೆ ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿ ಜನರ ಭಾವನೆ ಕೆರಳಿಸುವಂತಹ ವರದಿಯ ಪ್ರಸಾರವನ್ನು ಯೂಟ್ಯೂಬರ್ಸ್ ಹಾಗೂ ಸಾಮಾಜಿಕ ಜಾಲತಾಣಗಳು ಕೂಡಲೇ ನಿಲ್ಲಿಸಬೇಕು. ಇಲ್ಲದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಸರ್ಕಾರ ಕಠಿಣ ಎಚ್ಚರಿಕೆ ನೀಡಿದೆ. ವಿಧಾನಸಭೆಯಲ್ಲಿ ಬಿಜೆಪಿ ಹಿರಿಯ ಶಾಸಕ ಮತ್ತು ಮಾಜಿ ಸಚಿವ ಎಸ್. ಸುರೇಶ್ ಕುಮಾರ್ ಅವರ ಪ್ರಶ್ನೆಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಉತ್ತರಿಸಿ, ಧರ್ಮಸ್ಥಳ ಪ್ರಕರಣದಲ್ಲಿ ಯೂಟ್ಯೂಬ್ ಸೇರಿ ಸಾಮಾಜಿಕ ಜಾಲತಾಣಗಳಲ್ಲಿ ಭಾವನೆಗಳನ್ನು ಕೆರಳಿಸುವಂತಹ ವರದಿ ಮಾಡಲಾಗುತ್ತಿದೆ ಎಂದು ದೂರುಗಳು ಬಂದಿವೆ. ನಾವು ಅದನ್ನು ಗಮನಿಸಿದ್ದೇವೆ. ಹೀಗೆ ಅವಹೇಳನಕಾರಿಯಾಗಿ ಸುದ್ದಿ ಮಾಡುವವರು, ಭಾವನೆಗಳನ್ನು ಕೆರಳಿಸುವವರು ಈ ಕೂಡಲೇ ಅದನ್ನು ನಿಲ್ಲಿಸಬೇಕು. ಈ ಎಚ್ಚರಿಕೆಯನ್ನು ನಿರ್ಲಕ್ಷಿಸಿ ಮುಂದುವರಿದರೆ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon