ಚಿತ್ರದುರ್ಗ : ಚಳ್ಳಕೆರೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಿವಿಧ ಗ್ರಾಮ, ಹೋಬಳಿ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ನಿರ್ಮಿಸಲಾಗಿರುವ ಡಾ.ಬಿ.ಆರ್.ಅಂಬೇಡ್ಕರ್, ಡಾ.ಜಗಜೀವನ ರಾಂ ಹಾಗೂ ಸೇವಲಾಲ್ ಭವನಗಳನ್ನು ನಿರ್ವಹಣೆ ಮಾಡಲು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಸರ್ಕಾರ ನಿಗದಿ ಪಡಿಸಿದ ಮೊತ್ತದಲ್ಲಿ ಅಗತ್ಯ ಮೂಲಭೂತ ಸೌಲಭ್ಯಗಳೊಂದಿಗೆ 3 ಜನ ನಾಮನಿರ್ದೇಶಿತ ಸಮಿತಿ ಭವನಗಳ ನಿರ್ವಹಣೆ ಮಾಡಲಿದೆ. ಪರಿಶಿಷ್ಟ ಜಾತಿಗೆ ಸೇರಿದ ಗಣ್ಯರು ಅರ್ಜಿ ಸಲ್ಲಿಸಬಹುದು.
ಆಸಕ್ತರು ಜಾತಿ ಪ್ರಮಾಣ ಪತ್ರ, ಆಧಾರ್ ಪ್ರತಿ, ಗುರುತಿನ ಚೀಟಿ, ಸಂಬಂಧಪಟ್ಟ ಗ್ರಾಮದ ಪಿಡಿಓ ಅವರಿಂದ ಪಡೆದ ವಾಸಸ್ಥಳ ದೃಢೀಕರಣ ಪತ್ರ, ಇತ್ತೀಚಿನ 2 ಭಾವಚಿತ್ರ, ಪರಿಶಿಷ್ಟ ಜಾತಿ ಜನಾಂಗ ಶ್ರೇಯೋಭಿವೃದ್ಧಿಗಾಗಿ ಶ್ರಮಿಸಿದ ಕುರಿತ ಪ್ರಸಂಶನಾ ಪತ್ರಗಳೊಂದಿಗೆ ಸೆಪ್ಟೆಂಬರ್ 3 ರ ಒಳಗೆ ಚಳ್ಳಕೆರೆ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಅರ್ಜಿ ಸಲ್ಲಿಸುವಂತೆ ಪ್ರಕಟಣೆ ತಿಳಿಸಿದೆ.