ಧರ್ಮಸ್ಥಳ ಪ್ರಕರಣ: ಎಸ್‌ಐಟಿ ಯಿಂದ ನೇತ್ರಾವತಿ ತೀರದ ಬಂಗ್ಲೆಗುಡ್ಡೆಯ ಸಂಪೂರ್ಣ ಶೋಧ ಆರಂಭ

WhatsApp
Telegram
Facebook
Twitter
LinkedIn

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗುತ್ತಿರುವ ಕೊಲೆ, ಮೃತದೇಹ ಹೂತುಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ (SIT) ನೇತ್ರಾವತಿ ನದಿ ಸ್ನಾನಘಟ್ಟದ ಸಮೀಪವಿರುವ ಬಂಗ್ಲೆಗುಡ್ಡೆ ಅರಣ್ಯ ಪ್ರದೇಶದಲ್ಲಿ ಶವಗಳ ಅವಶೇಷಗಳಿಗಾಗಿ ಶೋಧ ಕಾರ್ಯಾಚರಣೆಯನ್ನು ಆರಂಭಿಸಿದೆ. ಈ ಕಾರ್ಯದಲ್ಲಿ ಸುಮಾರು 50ರಷ್ಟು ಸಿಬ್ಬಂದಿಗಳನ್ನು ಎಸ್‌ಐಟಿ ನಿಯೋಜಿಸಿದೆ ಎಂದು ತಿಳಿದು ಬಂದಿದೆ.

ಈ ಪ್ರದೇಶದಲ್ಲಿ ಹಲವಾರು ಮೃತದೇಹಗಳ ಅವಶೇಷಗಳಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪ್ರಕರಣದ ಸಾಕ್ಷಿ ಚಿನ್ನಯ್ಯ ಅವರು SITಗೆ ನೀಡಿದ್ದ ತಲೆಬುರುಡೆಯ ಅವಶೇಷ ಕೂಡ ಇದೇ ಸ್ಥಳದಿಂದ ತರಲಾಗಿದೆ ಎಂದು ತನಿಖೆಯಲ್ಲಿ ದೃಢಪಟ್ಟಿದೆ.

ಸೌಜನ್ಯಾಳ ಮಾವ ವಿಠಲ ಗೌಡ ಅವರು ಕೂಡ ಈ ಹಿಂದೆ ಸ್ಥಳ ಮಹಜರು ನಡೆಸುವ ಸಂದರ್ಭದಲ್ಲಿ ಬಂಗ್ಲೆಗುಡ್ಡೆ ಪ್ರದೇಶದಲ್ಲಿ ಅನೇಕ ಮೃತದೇಹಗಳ ಅವಶೇಷಗಳನ್ನು ನೋಡಿದ್ದಾಗಿ ಹೇಳಿಕೆ ನೀಡಿದ್ದರು. ಈ ಹೇಳಿಕೆಗಳ ಆಧಾರದ ಮೇಲೆ ಮತ್ತು ಹೆಚ್ಚಿನ ಮಾಹಿತಿ ಕಲೆಹಾಕಲು, ಸುಮಾರು 12 ಎಕರೆಗಳಷ್ಟು ವ್ಯಾಪ್ತಿಯ ಈ ಅರಣ್ಯ ಪ್ರದೇಶವನ್ನು ಶೋಧಿಸಲು SIT ನಿರ್ಧರಿಸಿತ್ತು.

ಬೆಳ್ತಂಗಡಿ ವಲಯ ಅರಣ್ಯ ಇಲಾಖೆಗೆ ಸೇರಿದ ಈ ಪ್ರದೇಶದಲ್ಲಿ ಶೋಧ ಕಾರ್ಯ ನಡೆಸಲು SIT ಅರಣ್ಯ ಇಲಾಖೆಯಿಂದ ಅಗತ್ಯ ಅನುಮತಿಯನ್ನು ಪಡೆದುಕೊಂಡಿದೆ. ಇಂದು ಬೆಳಗ್ಗೆಯಿಂದಲೇ ಶೋಧ ಕಾರ್ಯ ಆರಂಭವಾಗಿದ್ದು, ಇದರಿಂದ ಪ್ರಕರಣದ ತನಿಖೆಗೆ ಹೊಸ ದಿಕ್ಕು ಸಿಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon