ಚಿತ್ರದುರ್ಗ : ಹಿರಿಯೂರು ಉಪ ವಿಭಾಗದ ವ್ಯಾಪ್ತಿಯ ಹರಿಯಬ್ಬೆ ಹಾಗೂ ಪಿ.ಡಿ. ಕೋಟೆ 66/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ 2ನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ನಿರ್ವಹಿಸುವ ಹಿನ್ನಲೆಯಲ್ಲಿ ಸದರಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಸೆ.25ರ ಬೆಳಿಗ್ಗೆ 10 ರಿಂದ ಸಂಜೆ 05 ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಹರಿಯಬ್ಬೆ, ಧರ್ಮಪುರ, ಶ್ರವಣಗೆರೆ, ಬೆನಕನಹಳ್ಳಿ, ಸಕ್ಕರ, ಕೃಷ್ಣಪುರ, ಸೂಗುರು, ಬುರುಡುಕುಂಟೆ, ಚಿಲ್ಲಹಳ್ಳಿ, ಈಶ್ವರಗೆರೆ, ಹೂವಿನಹೊಳೆ, ಅಬ್ಬಿನಹೊಳೆ, ಕಣಜನಹಳ್ಳಿ, ಬೇತೂರು, ಬೇತೂರು ಪಾಳ್ಯ, ವಿ.ಕೆ.ಗುಡ್ಡ, ಪಿ.ಡಿ.ಕೋಟೆ, ಖಂಡೆನಹಳ್ಳಿ, ಹಲಗಲದ್ಧಿ, ಮದ್ದಿಹಳ್ಳಿ, ಹೊಸಕೆರೆ, ಅರಳಿಕೆರೆ, ಬಿ.ಕೆ.ಹಟ್ಟಿ, ಹಾಗೂ ಸುತ್ತ ಮುತ್ತಲಿನ ಗ್ರಾಮದದಲ್ಲಿ ವಿದ್ಯುತ್ ಆಡಚಣೆಯಾಗಲಿದೆ. ಗ್ರಾಹಕರು, ರೈತರು ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ಹಿರಿಯೂರು ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.