ದಾವಣಗೆರೆ : ದೇಶದ ವಿವಿಧ ಬ್ಯಾಂಕ್ ಗಳ ಖಾತೆಯಲ್ಲಿ ಹಣ ಕಳ್ಳತನ ಮಾಡಿದ್ದ ವಂಚಕನನ್ನು ಸೈಬರ್ ಪೊಲೀಸರು ಬಂಧಿಸಿದ್ದಾರೆ. ವಿವಿಧ ಬ್ಯಾಂಕ್ ಗಳಲ್ಲಿ ಬರೋಬ್ಬರಿ 150 ಕೋಟಿ ರೂಪಾಯಿ ಕಳ್ಳತನ ಮಾಡಿರುವ ವಂಚಕನನ್ನು ಇದೀಗ ಸೈಬರ್ ಠಾಣೆ ಪೋಲಿಸರು ದಾವಣಗೆರೆಯಲ್ಲಿ ಅರೆಸ್ಟ್ ಮಾಡಿದ್ದಾರೆ.
ಹೌದು ದೇಶದ ವಿವಿಧ ಬ್ಯಾಂಕ್ ಗಳ ಖಾತೆಯಲ್ಲಿ ಬರೋಬ್ಬರಿ 150 ಕೋಟಿ ರೂ.ವಂಚಿಸಿರುವ ಆರೋಪಿ ಸೈಯದ್ ಅರ್ಫಾತ್ ನನ್ನು ಸೈಬರ್ ಪೊಲೀಸರು ಬಂಧಿಸಿದ್ದಾರೆ. ಸಿಸಿಟಿವಿ ಕೆಲಸ ಮಾಡುತ್ತಿದ್ದ ಆರೋಪಿ ಸೈಯದ್ ಅರ್ಫಾತ್, ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ಶಾಂತಿನಗರದ ನಿವಾಸಿ ಎಂದು ಗುರುತಿಸಲಾಗಿದೆ.
ತಲೆಮರೆಸಿಕೊಂಡ ಇಬ್ಬರು ಆರೋಪಿಗಳಿಗಾಗಿ ಹುಡುಕಾಟ ಆರಂಭಿಸಲಾಗಿದೆ. ಆರೋಪಿ ಖಾತೆಯಲ್ಲಿ 150 ಕೋಟಿ ರೂ. ಡೆಪಾಸಿಟ್ ಮಾಡಲಾಗಿದೆ. ಆರೋಪಿಗಳು 132 ಕೋಟಿ ಹಣ ವಿತ್ ಡ್ರಾ ಮಾಡಿದ್ದು, 18 ಕೋಟಿ ರೂ.ಗಳನ್ನು ಪೊಲೀಸರು ಫ್ರೀಜ್ ಮಾಡಿದ್ದಾರೆ. ದಾವಣಗೆರೆ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.