ಬೆಂಗಳೂರು: ಬೆಂಗಳೂರು ಗ್ರಾಮಾಂತರ ಗ್ರಾಮ ಪಂಚಾಯ್ತಿ ಪಿಡಿಓ ಲಂಚದ ಹಣವನ್ನು ಪಡೆಯುತ್ತಿದ್ದ ವೀಡಿಯೋ ವೈರಲ್ ಆಗಿತ್ತು. ಈ ವೀಡಿಯೋ ವೈರಲ್ ಬೆನ್ನಲ್ಲೇ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮ ಪಂಚಾಯ್ತಿ ಪಿಡಿಒ ಅಮಾನತುಗೊಳಿಸಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಿಇಒ ಅನುರಾಧಾ ಅವರು ಈ ಆದೇಶ ಮಾಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮ ಪಂಚಾಯ್ತಿ ಪಿಡಿಒ ಶಿವಾನಂದ ಮರಕೇರಿ ಲಂಚದ ಹಣ ಪಡೆಯುತ್ತಿದ್ದಂತ ವೀಡಿಯೋ ವೈರಲ್ ಆಗಿತ್ತು.
ಈ ಕುರಿತಂತೆ ತನಿಖೆಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಿಇಓ ಅನುರಾಧಾ ಆದೇಶಿಸಿದ್ದರು. ವರದಿಯಲ್ಲಿ ಹಾದ್ರಿಪುರ ಗ್ರಾಮ ಪಂಚಾಯ್ತಿ ಪಿಡಿಓ ಶಿವಾನಂದ ಮರಕೇರಿ ಲಂಚ ಪಡೆದಿದ್ದು ಸಾಭೀತಾದ ಹಿನ್ನಲೆಯಲ್ಲಿ ಅವರನ್ನು ಸಸ್ಪೆಂಡ್ ಮಾಡಿ ಆದೇಶಿಸಿದ್ದಾರೆ.