‘ಎರಡೂವರೆ ವರ್ಷ ಸಿಎಂ ಅಂತ ತೀರ್ಮಾನ ಆಗಿಲ್ಲ’- ಸಿದ್ದರಾಮಯ್ಯ

WhatsApp
Telegram
Facebook
Twitter
LinkedIn

ಬೆಳಗಾವಿ :ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯುತ್ತಿದ್ದ ಸಂದರ್ಭದಲ್ಲಿ ಕಾಂಗ್ರೆಸ್ ಕುರ್ಚಿ ಕದನದ ಕುರಿತು ಚರ್ಚೆ ನಡೆದಿದೆ.

ಕಲಾಪದ ನಡುವೆ ಸಿಎಂ ಕಾಲೆಳೆದ ವಿಪಕ್ಷ ನಾಯಕ ಆರ್.ಅಶೋಕ್ . ಕಳೆದ 4 ದಿನಗಳಿಂದ ಬಳಲಿದ್ದೀರಾ, ನಾವು ರಾಜಕೀಯ ನಿಶ್ಯಕ್ತಿ ಅನ್ಕೊಂಡಿದ್ವಿ. ನಿಮಗೆ ರಾಜಕೀಯ ಶಕ್ತಿ ಬಂದಿದೆಯಾ? ಎಂದರು. ಈ ವೇಳೆ ಪ್ರತಿಕ್ರಿಯಿಸಿದ ಸಿಎಂ, ನನಗೆ ರಾಜಕೀಯ ನಿಶ್ಯಕ್ತಿ ಇಲ್ವೇ ಇಲ್ಲ, ಅಂಥ ಅವಕಾಶ ಸೃಷ್ಟಿಯಾಗೋದಿಲ್ಲ. ರಾಜಕೀಯವನ್ನು ಅಷ್ಟೊಂದು ತಲೆ ಕೆಡಿಸಿಕೊಂಡು ಮಾಡೋ ಅಗತ್ಯವೂ ಇಲ್ಲ ಎಂದು ತಿರುಗೇಟು ನೀಡಿದರು.

ಇನ್ನೂ ಅಧಿವೇಶನದ ಕಡೇ ದಿನ ಸಿಎಂ ಸಿದ್ದರಾಮಯ್ಯ ಕುರ್ಚಿ ಕದನಕ್ಕೆ ಸ್ಪಷ್ಟತೆ ಕೊಟ್ಟಿದ್ದಾರೆ. ಎರಡೂವರೆ ವರ್ಷ ಸಿಎಂ ಅಂತಾ ತೀರ್ಮಾನ ಆಗಿಲ್ಲ ಎನ್ನುವ ಮೂಲಕ ಕುರ್ಚಿ ಕದನಕ್ಕೆ ತೆರೆ ಎಳೆದಿದ್ದಾರೆ. ವಿಧಾನಸಭೆಯಲ್ಲಿ ಎರಡೂವರೆ ವರ್ಷ ಸಿಎಂ ಅಂತ ತೀರ್ಮಾನ ಆಗಿಲ್ಲ. ಶಾಸಕರು 5 ವರ್ಷಕ್ಕೆ ಸಿಎಂ ಆಯ್ಕೆ ಮಾಡಿದ್ದಾರೆ. ನಾನು ಐದು ವರ್ಷಕ್ಕೆ ಸಿಎಂ ಆಗಿ ಆಯ್ಕೆ ಆಗಿದ್ದೇನೆ ಅಂತ ವಿಪಕ್ಷ ನಾಯಕ ಅಶೋಕ್‌ಗೆ ತಿರುಗೇಟು ಕೊಟ್ಟಿದ್ದಾರೆ,

ಎರಡೂವರೆ ವರ್ಷಕ್ಕೆ ಅಂತ ಹೇಳೇ ಇಲ್ಲ, ಆ ತೀರ್ಮಾನ ಆಗಿಲ್ಲ. ಈಗ ನಾನೇ ಮುಖ್ಯಮಂತ್ರಿ, ಮುಂದೆಯೂ ನಾನೇ ಇರ್ತೀನಿ. ಈಗ ನಾನು ಸಿಎಂ ಆಗಿದ್ದೇನೆ, ನನ್ನ ಪ್ರಕಾರ ಹೈಕಮಾಂಡ್ ನನ್ನ ಪರವೇ ಇದೆ. ಈಗಲೂ ನಾನೇ ಮುಖ್ಯಮಂತ್ರಿ, ಹೈಕಮಾಂಡ್ ಹೇಳೋವರೆಗೂ ನಾನೇ ಮುಖ್ಯಮಂತ್ರಿ. ನನಗೆ ದೈಹಿಕ ನಿಶ್ಯಕ್ತಿ ಇರಬಹುದು, ರಾಜಕೀಯ ನಿಶ್ಯಕ್ತಿ ಇಲ್ಲ, ಈಗಲೂ ಇಲ್ಲ, ಮುಂದೆಯೂ ಇಲ್ಲ, ಹಿಂದೆಯೂ ಇರಲಿಲ್ಲ. ಜನರ ಆಶೀರ್ವಾದ ಇದ್ದರೆ ಮಾತ್ರ ಅಧಿಕಾರ, ನಾನು ಹಣೆಬರಹದಲ್ಲಿ ನಂಬಿಕೆ ಇಟ್ಟಿಲ್ಲ ಎಂದರಲ್ಲದೇ ನಮಗೆ ಯಾರೂ ನಿರ್ದೇಶನ ಕೊಡೋರು ಇಲ್ಲ, ನಮಗೆ ನಾವೇ ನಿರ್ದೇಶಕರು, ನಾವೇ ಪ್ರೊಡ್ಯೂಸರ್, ನಾವೇ ಆ್ಯಕ್ಟರ್‌ಗಳು ಅಂತ ಅಧಿಕಾರ ಹಂಚಿಕೆ ಮಾತುಕತೆಗೆ ಕುರಿತು ತೆರೆ ಎಳೆದಿದ್ದಾರೆ.

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon