ಮಂಡ್ಯ :ಕನ್ನಡದ ‘ ತಿಥಿ’ ಸಿನಿಮಾ ಖ್ಯಾತಿಯ ಹಿರಿಯ ನಟ ‘ಸೆಂಚೂರಿ ಗೌಡ’ ಇಂದು ನಿಧನರಾಗಿದ್ದಾರೆ. ಅವರು ನಿನ್ನೆ ರಾತ್ರಿ ಸಿಂಗರೇಗೌಡನ ಕೊಪ್ಪಲು ಗ್ರಾಮದಲ್ಲಿ ವಿಧಿವಶರಾಗಿದ್ದಾರೆ ಎಂದು ತಿಳಿದು ಬಂದಿದೆ.
ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಸಿಂಗ್ರೇಗೌಡನ ಕೊಪ್ಪಲಿನಲ್ಲಿ ಸಿಂಗಾರಿ ಗೌಡ (ಸೆಂಚೂರಿ ಗೌಡ) ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದರು.
ಇಂದು ಸಂಗ್ರೇಗೌಡನ ಕೊಪ್ಪಲಿನಲ್ಲಿ ಸೆಂಚುರಿ ಗೌಡರ ಅಂತ್ಯಸಂಸ್ಕಾರ ನೆರವೇರಲಿದೆ ಎಂದು ಕುಟುಂಬದ ಮೂಲಗಳು ಮಾಹಿತಿ ನೀಡಿದೆ. ತಿಥಿ ಸಿನಿಮಾದ ಮೂಲಕ ಸಿಂಗಾರಿ ಗೌಡ ಅಲಿಯಾಸ್ ಸೆಂಚೂರಿ ಗೌಡ ಜನಪ್ರಿಯರಾಗಿದ್ದರು.


































