ಹೊಸದುರ್ಗ: ಫೆ.6 ರಿಂದ ಕುಂದೂರು ಗೊಲ್ಲರಹಟ್ಟಿಯಲ್ಲಿ ಶ್ರೀ ವೆಂಕಟೇಶ್ವರಸ್ವಾಮಿಯ ನೂತನ ಆಲಯ ಕಳಶಾರೋಹಣ.!

WhatsApp
Telegram
Facebook
Twitter
LinkedIn

 

ಚಿತ್ರದುರ್ಗ: ಹೊಸದುರ್ಗ ತಾಲ್ಲೂಕಿನ ಕಸಬಾ ಹೋಬಳಿಯ ಕುಂದೂರು ಗೊಲ್ಲರಹಟ್ಟಿ (ಶ್ರೀನಿವಾಸಪುರ) ಗ್ರಾಮದಲ್ಲಿ ನೆಲೆಸಿರುವ ಶ್ರೀ ವೆಂಕಟೇಶ್ವರಸ್ವಾಮಿಯವರ ನೂತನ ಆಲಯ ಜೀರ್ಣೋದ್ಧಾರ ಹಾಗೂ ಕಳಶಾರೋಹಣ ಕಾರ್ಯಕ್ರಮವು ಫೆಬ್ರವರಿ 6 ರಿಂದ 10 ರವರೆಗೆ ಅತ್ಯಂತ ವಿಜೃಂಭಣೆಯಿಂದ ಜರುಗಲಿದೆ.

ಫೆ.6ರಂದು ಜಾಂಡೇವು ಹೊಡೆಯುವುದು, ಮೀಸಲು ಅಕ್ಕಿ ಅಳೆಯುವುದು, ಗಂಗಾಸ್ನಾನಕ್ಕೆ ಹೊರಡುವುದು. ಫೆ.7ರಂದು ಮುಂಜಾನೆಯಿಂದಲೇ ದಶರಥರಾಮೇಶ್ವರ ಪುಣ್ಯಕ್ಷೇತ್ರದಲ್ಲಿ ವೆಂಕಟೇಶ್ವರಸ್ವಾಮಿ ಮತ್ತು ಕಾಟಂಲಿಂಗೇಶ್ವರಸ್ವಾಮಿ ದೇವರುಗಳ ಗಂಗಾಸ್ನಾನ ಮತ್ತು ವಿವಿಧ ದೇವತೆಗಳ ಪೂರ್ಣಕುಂಭ ಸ್ವಾಗತದೊಂದಿಗೆ ಧಾರ್ಮಿಕ ವಿಧಿವಿಧಾನಗಳು ಆರಂಭವಾಗಲಿವೆ. ಸಂಜೆ ವಾಸ್ತುಹೋಮ ಹಾಗೂ ರಕ್ಷಾಬಂಧನ ಕಾರ್ಯಕ್ರಮಗಳು ನಡೆಯಲಿವೆ. ಫೆ.08ರಂದು ಬೆಳಿಗ್ಗೆ 9.30 ರಿಂದ 10.30ರ ಒಳಗೆ ಸಲ್ಲುವ ಶುಭ ಮೇಷ ಲಗ್ನದಲ್ಲಿ ಉತ್ಸವದ ಪ್ರಮುಖ ಆಕರ್ಷಣೆಯಾದ ನೂತನ ದೇವಾಲಯದ  ಪ್ರವೇಶ ಹಾಗೂ ಕಳಶಾರೋಹಣ ಕಾರ್ಯಕ್ರಮವು ನೆರವೇರಲಿದೆ.

ನೆಲಮಂಗಲ ತಾಲ್ಲೂಕು ಡಾಬಸ್‍ಪೇಟೆ ವನಕಲ್ ಮಠದ ಡಾ.ಬಸವರಾಮಾನಂದ ಮಹಾಸ್ವಾಮಿಗಳವರು ಈ ಪುಣ್ಯ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಕಳಶಾರೋಹಣ ನೆರವೇರಿಸಲಿದ್ದಾರೆ. ನಂತರ ಟಗರು ನೆಗೆಸುವುದು, ಟಗರಿನ ಪೂಜೆ, ಮಹಾಮಂಗಳಾರತಿ, ಧೂಪದ ಸೇವೆ, ದೊಡ್ಡೆಡೆ ಸೇವೆ ಹಾಗೂ ಭಕ್ತಾದಿಗಳಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ. ಸಂಜೆ 5 ಗಂಟೆಯಿಂದ ಕೋಲಾಟ, ಜಾನಪದ ನೃತ್ಯ ಹಾಗೂ ಭಜನೆಯಂತಹ ಸಾಂಸ್ಕøತಿಕ ಕಾರ್ಯಕ್ರಮಗಳು ಗ್ರಾಮದ ಕಳೆಯನ್ನು ಹೆಚ್ಚಿಸಲಿವೆ.

ಫೆ.9ರಂದು ಸಂಜೆ 4 ಗಂಟೆಯಿಂದ ಹಿರಿಯರ ಪೂಜೆ, ಬಸವನ ಗುಡ್ಡೆಯ ಪೂಜೆ ಮತ್ತು ದಾಸೋಹ ನಡೆಯಲಿದೆ.  ಫೆ. 10ರಂದು ಬೆಳಿಗ್ಗೆ 10 ಗಂಟೆಯಿಂದ ದೇವಸ್ಥಾನದ ಸುತ್ತ ಕುರಿ ಕರೆಯುವ ವಿಶಿಷ್ಟ ಆಚರಣೆಯೊಂದಿಗೆ ಈ ಐದು ದಿನಗಳ ಧಾರ್ಮಿಕ ಉತ್ಸವ ಸಂಪನ್ನಗೊಳ್ಳಲಿದೆ.

ಮಠಾಧೀಶರ ಸಾನಿಧ್ಯದಲ್ಲಿ ಧಾರ್ಮಿಕ ಸಮಾರಂಭ: ಫೆ.8ರಂದು ಮಧ್ಯಾಹ್ನ 2ಕ್ಕೆ ಮಠಾಧೀಶರ ದಿವ್ಯ ಸಾನಿಧ್ಯದಲ್ಲಿ ಹಾಗೂ ವಿವಿಧ ಗಣ್ಯರ ಉಪಸ್ಥಿತಿಯಲ್ಲಿ ಭವ್ಯ ಧಾರ್ಮಿಕ ಸಮಾರಂಭ ಹಮ್ಮಿಕೊಳ್ಳಲಾಗಿದೆ.

ಕೃಷ್ಣ ಯಾದವಾನಂದ ಮಹಾಸ್ವಾಮಿಗಳು, ಶಿವಲಿಂಗಾನಂದ ಮಹಾಸ್ವಾಮಿಗಳು, ಪುರುಷೋತ್ತಮಾನಂದ ಮಹಾಸ್ವಾಮಿಗಳು, ಬಸವ ರಮಾನಂದ ಮಹಾಸ್ವಾಮಿಗಳು, ಸದ್ಗುರು ತಿಮ್ಮಪ್ಪ ಸ್ವಾಮಿಗಳು ದಿವ್ಯಸಾನಿಧ್ಯ ವಹಿಸುವರು. ಆಹಾರ ಮತ್ತು ನಾಗರೀಕ ಸರಬರಾಜು ನಿಗಮದ ಅಧ್ಯಕ್ಷರು ಹಾಗೂ ಹೊಸದುರ್ಗ ಶಾಸಕರಾದ ಬಿ.ಜಿ. ಗೋವಿಂದಪ್ಪ ಉದ್ಘಾಟನೆ ನೆರವೇರಿಸುವರು. ವಿಶೇಷ ಆಹ್ವಾನಿತರಾಗಿ ಮಾಜಿ ಸಚಿವರು ಹಾಗೂ ಮಧುಗಿರಿ ಶಾಸಕರಾದ ಕೆ.ಎನ್. ರಾಜಣ್ಣ ಭಾಗವಹಿಸುವರು. ಸಮಾಜ ಕಲ್ಯಾಣ ಇಲಾಖೆ ವ್ಯವಸ್ಥಾಪಕ ನಿರ್ದೇಶಕಿ ಹಾಗೂ ಬೆಂಗಳೂರು ನಗರ ವಿಶೇಷ ಜಿಲ್ಲಾಧಿಕಾರಿ ಸಿ.ಸತ್ಯಭಾವ ಶಿವಲಿಂಗಪ್ಪನವರು ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಂಸದರಾದ ಗೋವಿಂದ ಕಾರಜೋಳ, ವಿಧಾನ ಪರಿಷತ್ ಸದಸ್ಯರಾದ  ಕೆ.ಎಸ್. ನವೀನ್, ಡಿ.ಟಿ. ಶ್ರೀನಿವಾಸ್, ನಾಗರಾಜ್ ಯಾದವ್ ಸೇರಿದಂತೆ ಮಾಜಿ ಶಾಸಕರು ಹಾಗೂ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon