ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಆದಿಶಕ್ತಿವಿಡಿದಾಡುವರೆಲ್ಲರು ಜಂಗಮವಲ್ಲ,
ಅನಾದಿಶಕ್ತಿವಿಡಿದಾಡುವರೆಲ್ಲರು ಜ್ಞಾನಿಗಳಲ್ಲ,
ಆದಿ ಅನಾದಿಯೆಂಬೀ ಎರಡ ಭೇದಿಸಿ ದಾಂಟಿ,
ಇಚ್ಛಾಶಕ್ತಿಯ ಇಚ್ಛೆಯ ಮರೆದು,
ಕ್ರಿಯಾಶಕ್ತಿಯ ಭಾವವ ಬಿಟ್ಟು,
ಜ್ಞಾನಶಕ್ತಿಯ ಠಾವವನೊಲ್ಲದೆ,
ತಾನು ತಾನಾದವಂಗೆ ಏನೂ ಇದಿರಿಲ್ಲಾ,
ಎಂದನಂಬಿಗ ಚೌಡಯ್ಯ.
-ಅಂಬಿಗರ ಚೌಡಯ್ಯ

































