ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಉಕ್ಕುವ ಬೆಣ್ಣೆಯ ಒಲೆಯ ಮೇಲಿರಿಸಿ,
ಅಳಲುತ್ತ ಬಳಲುತ್ತಲಿರ್ದಾರಯ್ಯ.
ಅಲ್ಲದ ಚೇಳಿನೊಳು ಚಲ್ಲವಾಡಿ,
ಎಲ್ಲರೂ ನಾಣುಗೆಟ್ಟರಲ್ಲಯ್ಯಾ.
ಎಲ್ಲರ ಅರಿವು, ಇಲ್ಲಿಯೆ ಉಳಿಯಿತ್ತು.
ಇದ ಬಲ್ಲವರಾರೊ, ಮಾರೇಶ್ವರಾ ?
-ಮಾರೇಶ್ವರೊಡೆಯರು

































