ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಅರ್ಪಿತವಲ್ಲದುದ ಕಲಸಿದ ಕೈ, ಉಂಡ ಬಾಯಿ,
ತುಂಬಿದ ಘಟ, ಅರಿದು ಕೊಂಡ ಆತ್ಮ
ಇವ ಹಿಡಿದಡೆ ಭಂಗ.
ಸಡಗರಿಸಿ ತುಂಬಿದ ಗರಳ ಘಟವನೊಡೆದು ಕಿತ್ತು
ಆಸೆಯ ನುರಿಚಿ ಹಾಕಿ
ಮತ್ತಾ ಅಂಗವನೊಡಗೂಡಿಹೆನೆಂಬ ಚಿತ್ತದ ಹಂಗು ಬೇಡ
ಮತ್ತಾ ತಪ್ಪ ಕಂಡು ಎನ್ನಂಗವನೊಡಗೂಡುವಮನಕ್ಕೆ ಮನೋಹರ ಶಂಕೇಶ್ವರ ಲಿಂಗವೆ ಬೇಡಾ.
-ಕರುಳ ಕೇತಯ್ಯ

































