ಬೆಂಬಲ ಬೆಲೆಯಲ್ಲಿ ಕಡಲೆಕಾಳು ಖರೀದಿ ಬೆಲೆ ಇಷ್ಟು.!

WhatsApp
Telegram
Facebook
Twitter
LinkedIn

 

ಚಿತ್ರದುರ್ಗ: ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ವತಿಯಿಂದ 2025-26ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಜಿಲ್ಲೆಯ ರೈತರಿಂದ ಕಡಲೆಕಾಳು ಖರೀದಿಸಲು ಉದ್ದೇಶಿಸಲಾಗಿದ್ದು, ನೋಂದಣಿ ಪ್ರಕ್ರಿಯೆ ಆರಂಭವಾಗಿದೆ ಎಂದು ಕೆಎಸ್‍ಸಿಎಂಎಫ್ ಚಿತ್ರದುರ್ಗ ಶಾಖಾ ವ್ಯವಸ್ಥಾಪಕ ಬಸವೇಶ ತಿಳಿಸಿದ್ದಾರೆ.

ನಾಫೆಡ್ ಸಂಸ್ಥೆಯ ಸಹಯೋಗದೊಂದಿಗೆ ಕಡಲೆಕಾಳು ಖರೀದಿ ಪ್ರಕ್ರಿಯೆ ನಡೆಯಲಿದ್ದು, ಜಿಲ್ಲೆಯ ರೈತರು ತಮ್ಮ ಆಧಾರ್ ಕಾರ್ಡ್ ಬಳಸಿ ಬಯೋಮೆಟ್ರಿಕ್ ಮೂಲಕ ನಿಗದಿತ ಕೇಂದ್ರಗಳಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು. ಸರ್ಕಾರದ ಆದೇಶದಂತೆ ಪ್ರತಿ ಕ್ವಿಂಟಾಲ್‍ಗೆ ರೂ.5875ರಂತೆ ಪ್ರತಿ ರೈತರಿಂದ ಪ್ರತಿ ಎಕೆರೆಗೆ 4 ಕ್ವಿಂಟಾಲ್‍ನಂತೆ ಗರಿಷ್ಟ 40 ಕ್ವಿಂಟಾಲ್ ನಿಗದಿಪಡಿಸಿದ್ದು, ಕಡಲೆಕಾಳು ಖರೀದಿ ಮಾಡಲು ಜಿಲ್ಲಾ ಟಾಸ್ಕ್‍ಪೋರ್ಸ್‍ನಲ್ಲಿ ತೀರ್ಮಾನಿಸಲಾಗಿದೆ.

ಕಡಲೆಕಾಳು ಖರೀದಿ ಕೇಂದ್ರಗಳ ಮಾಹಿತಿ: ಚಿತ್ರದುರ್ಗ ತಾಲೂಕಿನಲ್ಲಿ ಚಿತ್ರದುರ್ಗ ಟೌನ್ ಸಹಕಾರ ಸಂಘ-8904308894, ಮಾಡನಾಯಕನಹಳ್ಳಿ-7975789403, ಚಿಕ್ಕಗೊಂಡನಹಳ್ಳಿ ಸಹಕಾರಿ ಸಂಘ-6362187408 ಹಾಗೂ ತುರವನೂರಿನ ಶ್ರೀ ಮಂಜುನಾಥ ಸ್ವಾಮಿ ರೈತ ಉತ್ಪಾದಕರ ಕಂಪನಿ-9620266826, ಚಳ್ಳಕೆರೆ ತಾಲೂಕಿನಲ್ಲಿ ರಾಮಜೋಗಿಹಳ್ಳಿ-9741392578, ಚಿಕ್ಕಮಧುರೆ ಸಹಕಾರ ಸಂಘ-6362928198, ಚಳ್ಳಕೆರೆ ಟಿಎಪಿಸಿಎಂಎಸ್-9844897046,  ಹಿರಿಯೂರು ತಾಲೂಕಿನಲ್ಲಿ ಮರಡಿಹಳ್ಳಿ ಸಹಕಾರ ಸಂಘ-9972604427, ಭರಂಪುರ (ಐಮಂಗಲ) ಸಹಕಾರ ಸಂಘ-9986182809, ಹಿರಿಯೂರು ಟಿ.ಎ.ಪಿ.ಸಿ.ಎಂ.ಸಿ-9611477549, ಲಕ್ಕವ್ವನಹಳ್ಳಿ ಸಹಕಾರ ಸಂಘ-9448697162, ಈಶ ರೈತ ಉತ್ಪಾದಕ ಕೇಂದ್ರ ನಿಯಮಿತ-9513553959.  ಹೊಸದುರ್ಗ ತಾಲ್ಲೂಕಿನಲ್ಲಿ ಹೊಸದುರ್ಗ ರಸ್ತೆ ಸಹಕಾರ ಸಂಘ-9483653725, ಹೊಳಲ್ಕೆರೆ ತಾಲೂಕಿನಲ್ಲಿ ರಾಮಗಿರಿ ಸಹಕಾರ ಸಂಘ-9663847812, ಮೊಳಕಾಲ್ಮೂರು ತಾಲ್ಲೂಕಿನ ರಾಂಪುರ ಟಿ.ಎ.ಪಿ.ಸಿ.ಎಂ.ಸಿ ಸಹಕಾರ ಸಂಘ-988645222 ಇಲ್ಲ್ಲಿ ಕಡಲೆ ಕಾಳು ಖರೀದಿ ಜರುಗಲಿದೆ ಎಂದು ಪ್ರಕಟಣೆ ತಿಳಿಸಿದೆ.

 

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon