ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಬೆಟ್ಟಕ್ಕೆ ಸಾರವಿಲ್ಲೆಂಬರು
ತರುಗಳು ಹುಟ್ಟುವಪರಿ ಇನ್ನೆಂತಯ್ಯಾ ?
ಇದ್ದಲಿಗೆ ರಸವಿಲ್ಲೆಂಬರು ;
ಕಬ್ಬುನ ಕರಗುವಪರಿ ಇನ್ನೆಂತಯ್ಯಾ ?
ಎನಗೆ ಕಾಯವಿಲ್ಲೆಂಬರು ; ಚೆನ್ನಮಲ್ಲಿಕಾರ್ಜುನನೊಲಿವಪರಿ ಇನ್ನೆಂತಯ್ಯಾ ?
-ಅಕ್ಕಮಹಾದೇವಿ






























