ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಶ್ವಾನ ಮಡಕೆಯನಿಳುಹಿ ಬೋನವನುಂಡು
ಮಡಕೆಯನೇರಿಸಲರಿಯದಂತೆ
ನಾನು ಷಟ್ಸ್ಥಲವನೋದಿ ಏನ ಮಾಡುವೆನಯ್ಯಾ,
ಅವಗುಣಂಗಳೆನ್ನ ಬೆನ್ನ ಬಿಡದನ್ನಕ್ಕರ
ಕಾರ್ಯವುಳ್ಳ ಕರ್ತ ಜಂಗಮಲಿಂಗದಲ್ಲಿ
ನಾನು ದಾಸೋಹವ ಮಾಡಲರಿಯದೆ ಕೆಟ್ಟೆನು,
ಕೂಡಲಸಂಗಮದೇವಾ.
-ಬಸವಣ್ಣ






























