ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ವಾದ್ಯಕ್ಕೆ ಬಂಧವಲ್ಲದೆ, ನಾದಕ್ಕೆ ಬಂಧವುಂಟೆ ?
ಅರಿವಿಂಗೆ ಬಂಧವಲ್ಲದೆ, ಅರುಹಿಸಿಕೊಂಬವಂಗುಂಟೆ ಬಂಧ ?
ಅರಿದೆಹೆನೆಂಬ ಭ್ರಮೆ, ಅರುಹಿಸಿಕೊಂಡೆಹೆನೆಂಬ ಕುರುಹು,
ಉಭಯನಾಸ್ತಿಯಾಗಿಯಲ್ಲದೆ ಭಾವಶುದ್ಧವಿಲ್ಲ,ಕಾಮಧೂಮ ಧೂಳೇಶ್ವರಾ.
-ಮಾದಾರ ಧೂಳಯ್ಯ






























