ಬೆಂಗಳೂರು: ಪೊಲೀಸ್ ಇಲಾಖೆಯ ಜಾಗ ಕಬಳಿಕೆ ಮಾಡಲು ಯತ್ನಿಸಿದ್ದ ಮೂವರು ಆರೋಪಿಗಳನ್ನು ಮಲ್ಲೇಶ್ವರಂ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಎ1 ಕೃಷ್ಣಮೂರ್ತಿ, ಎ2 ಶ್ರೀನಾಥ್ ನಗರಗಡ್ಡೆ, ಎ3 ಕೃಷ್ಣ ಅವರನ್ನು ಬಂಧಿಸಲಾಗಿದೆ. ಪೊಲೀಸ್ ಕ್ವಾಟ್ರಸ್ ಜಾಗ ಕಬಳಿಸಲು ಬಂಧಿತರು ಸ್ಕೆಚ್ ಹಾಕಿದ್ದರು. ಲೋಕಾಯುಕ್ತ ಪಿಐ ಕುಮಾರ್ ಮನೆಗೆ ವಿದ್ಯುತ್ ಬಿಲ್ ಬಂದಿತ್ತು. ಮಹಾಲಕ್ಷ್ಮಿ ಎಂಬ ಹೆಸರಿನಲ್ಲಿ ಬಂದಿದ್ದು, ವಿದ್ಯುತ್ ಬಿಲ್ಲಿಂದಲೇ ಆರೋಪಿಗಳ ಕೃತ್ಯ ಬೆಳಕಿಗೆ ಬಂದಿತ್ತು.
ನಗರದ ಹಲವು ಕಡೆ ಸರ್ಕಾರಿ ಜಾಗ ಕಬಳಿಸಿರುವ ಬಗ್ಗೆ ಮಾಹಿತಿ ಗೊತ್ತಾಗಿದೆ. ಸದ್ಯ ಮೂವರನ್ನು ಬಂಧಿಸಿದ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.






























