ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ದೇಹ ನಾನೆಂದು ನಂಬಿದೆ, ಎಲೆ ಮನವೆ.
ದೇಹದಲ್ಲಿಹ ಗುಣಂಗಳು ನಿನ್ನಲ್ಲಿ ಕಂಡಯ್ಯಾ ಮನವೆ.
ಪೃಥ್ವಿಯ ಗುಣ ಶಾಂತಿ, ಉದಕದ ಗುಣ ಸ್ವಾದ,
ಅಗ್ನಿಯ ಗುಣ ಸರ್ವಭಕ್ಷಣ, ವಾಯುವಿನ ಗುಣ ನಿರ್ಮಲತ್ವ,
ಆಕಾಶದ ಗುಣ ನಿರ್ವಯಲು.
ಈ ಪಂಚತತ್ವದ ಗುಣ ನಿನ್ನಲ್ಲಿರಲು,
ನೀನೆ ಪಂಚಮುಖ ನೋಡಾ ಮನವೆ,
ಕಪಿಲಸಿದ್ಧಮಲ್ಲಿಕಾರ್ಜುನಾ.
-ಸಿದ್ಧರಾಮೇಶ್ವರ
































