ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಮಳೆಹುಯ್ದರಾಕಾಶ ನೆನೆವುದೇ?.
ಬಿರುಗಾಳಿ ಬೀಸಿದರಾಕಾಶ ನೋವುದೇ?.
ಕಿತ್ತಲಗಿನಿಂದಿರದರೆ ಆಕಾಶ ಹರಿವುದೇ?.
ಬಚ್ಚಬರಿಯ ಬಯಲು ಕಟ್ಟು ಕುಟ್ಟಿಗೊಳಗಾಗಬಲ್ಲುದೇ?.
ನಿಶ್ಚಿಂತ ನಿರಾಳನಾದ ನಿಜೈಕ್ಯನ,
ತಥ್ಯಮಿಥ್ಯದಿಂದ ನುಡಿವ ತುಶ್ಚರ ನುಡಿ ತಟ್ಟಬಲ್ಲುದೇ
ವಸ್ತುವ ವಾಕುಶಾಸ್ತ್ರ ಖಂಡಿಸಬಲ್ಲುದೇ?ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
-ತೋಂಟದ ಸಿದ್ಧಲಿಂಗ ಶಿವಯೋಗಿಗಳು
































