ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಬಡತನಕ್ಕೆ ಉಂಬುವ ಚಿಂತೆ, ಉಣಲಾದರೆ ಉಡುವ ಚಿಂತೆ,
ಉಡಲಾದರೆ ಇಡುವ ಚಿಂತೆ, ಇಡಲಾದರೆ ಹೆಂಡಿರ ಚಿಂತೆ,
ಹೆಂಡಿರಾದರೆ ಮಕ್ಕಳ ಚಿಂತೆ, ಮಕ್ಕಳಾದರೆ ಬದುಕಿನ ಚಿಂತೆ,
ಬದುಕಾದರೆ ಕೇಡಿನ ಚಿಂತೆ, ಕೇಡಾದರೆ ಮರಣದ ಚಿಂತೆ,
ಇಂತೀ ಹಲವು ಚಿಂತೆಯಲ್ಲಿ ಇಪ್ಪವರ ಕಂಡೆನು.
ಶಿವನ ಚಿಂತೆಯಲ್ಲಿದ್ದವರೊಬ್ಬರನೂ ಕಾಣೆನೆಂದಾತ ನಮ್ಮ ಅಂಬಿಗರ ಚೌಡಯ್ಯ [ನಿಜ]ಶರಣನು.
-ಅಂಬಿಗರ ಚೌಡಯ್ಯ




























