ಬೆಂಗಳೂರು: ರಾಜ್ಯದಲ್ಲಿ ಜೂನ್ 21ರಂದು ನಡೆಯುವ ನೀಟ್ ಯುಜಿ ಮರು ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಪ್ರವೇಶ ಪತ್ರ ತೋರಿಸಿ ಉಚಿತವಾಗಿ ಸರ್ಕಾರಿ ಬಸ್ ಗಳಲ್ಲಿ ಪ್ರಯಾಣಿಸಬಹುದಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ನೀಟ್ ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ, ತೊಂದರೆ ಆಗದಂತೆ ಸರ್ಕಾರಿ ಬಸ್ ವ್ಯವಸ್ಥೆ ಕಲ್ಪಿಸಲಾಗುವುದು. ಸಿಇಟಿ ಸಂದರ್ಭದಲ್ಲೂ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿತ್ತು ಎಂದು ಹೇಳಿದ್ದಾರೆ.






























