ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಹರಿದ ನೀರಿನ ಅಡಿಯ ಕಾಣಬಹುದಲ್ಲದೆ
ನಿಂದ ಇಂಗಡಲಿನ ಅಡಿಯ ಕಂಡವರುಂಟೆ?
ಚಲನೆಯಿಂದ ತೋರುವ ತೋರಿಕೆಯ ಕಾಣಬಹುದಲ್ಲದೆ
ಶಬ್ದ ಮುಗ್ಧವಾದ ಶರಣನ ಚಿತ್ತವ ಭೇದಿಸಬಹುದೆ?
ಅದು ಸರಿಹರಿದ ಸಂಬಂಧ.
ಶಂಭುವಿನಿಂದಿತ್ತ ಸ್ವಯಂಭುವಿನಿಂದತ್ತ ಅತಿಬಳ ನೋಡಾ,
ಮಾತುಳಂಗ ಮಧುಕೇಶ್ವರನು.
-ದಾಸೋಹದ ಸಂಗಣ್ಣ































