ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಭವಿಜನ್ಮವ ಕಳದು ಭಕ್ತನ ಮಾಡಿದರಯ್ಯ.
ಪಂಚಭೂತದ ಪ್ರಕೃತಿಯ ಕಳದು ಪ್ರಸಾದಕಾಯವ ಮಾಡಿದರಯ್ಯ.
ಅಂಗೇಂದ್ರಿಯಂಗಳ ಕಳದು ಲಿಂಗೇಂದ್ರಿಯಂಗಳ ಮಾಡಿದರಯ್ಯ.
ಅಂಗವಿಷಯಭ್ರಮೆಯಂ ಕಳದು
ಲಿಂಗವಿಷಯಭ್ರಾಂತನ ಮಾಡಿದರಯ್ಯ.
ಅಂಗಕರಣಂಗಳ ಕಳದು
ಲಿಂಗಕರಣಂಗಳ ಬೆಸಸುವಂತೆ ಮಾಡಿದರಯ್ಯ.
ಕುಲಸೂತಕ ಛಲಸೂತಕ ತನುಸೂತಕ ನೆನವುಸೂತಕ ಭಾವಸೂತಕ
ಇಂತೀ ಸೂತಕವೆಂಬ ಭ್ರಾಂತನು ಬಿಡಿಸಿ
ನಿಭ್ರಾಂತನ ಮಾಡಿ ರಕ್ಷಿಸಿದ ಶ್ರೀಗುರುದೇವಂಗೆ
ನಮೋ ನಮೋ ಎಂಬೆನಯ್ಯ
ಅಖಂಡ ಪರಿಪೂರ್ಣ ಘನಲಿಂಗಗುರು ಚೆನ್ನಬಸವೇಶ್ವರಶಿವಸಾಕ್ಷಿಯಾಗಿ.
-ಕುಷ್ಟಗಿ ಕರಿಬಸವೇಶ್ವರ






























