ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಕರವೂರ ನಿರಹಂಕಾರ-ಸುಜ್ಞಾನಿದೇವಿಯರ
ಬಸುರಲ್ಲಿ ಬಂದರೆನ್ನಬಹುದೆ ಪ್ರಭುದೇವರ?
ಮಂಡಗೆಯ ಮಾದಿರಾಜ- ಮಾದಲಾಂಬಿಕೆಯಮ್ಮನವರ
ಬಸುರಲ್ಲಿ ಬಂದರೆನ್ನಬಹುದೆ ಬಸವೇಶ್ವರನ?
ಅಕ್ಕನಾಗಲಾಂಬಿಕೆಯಮ್ಮನ ಬಸುರಲ್ಲಿ
ಬಂದರೆನ್ನಬಹುದೆ ಚೆನ್ನಬಸವೇಶ್ವರನ?
ಮೊರಡಿಯ ಮುದ್ದುಗೌಡ-ಸುಗ್ಗವ್ವೆಯ [ರ]
ಬಸುರಲ್ಲಿ ಬಂದೆರೆನ್ನಬಹುದೆ ಸಿದ್ಧರಾಮೇಶ್ವರನ?
ಇವರು ಒಬ್ಬರಿಂದಾದವರಲ್ಲ, ತಮ್ಮಿಂದ ತಾವಾದರು.ಚಿಕ್ಕಯ್ಯಪ್ರಿಯ ಸಿದ್ಧಲಿಂಗ ಇಲ್ಲ ಇಲ್ಲ [ನಿಲ್ಲು] ಮಾಣು.
-ಘಟ್ಟಿವಾಳಯ್ಯ































