ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಅಕ್ಷರದ ಆದಿಮೂಲವನರಿಯಬಲ್ಲರೆ
ಪ್ರಾಣಲಿಂಗದ ಅಕ್ಷರದ ಹುಟ್ಟಾವಳಿಯು ಸ್ಥೂಲದಲ್ಲಿಹುದು.
ಅಕ್ಷರದ ನಿಲವು ಸೂಕ್ಷ್ಮದಲ್ಲಿಹುದು.
ಮಾತಿಗೆ ಮೊದಲು ಶಬ್ದಮುಗ್ಧವಾಗಿರಲು
ಕಾರಣದಲ್ಲಿಹುದು.
ಇಂತೀ ತ್ರಿವಿಧಪರಿಯ ಭೇದಾಭೇದಂಗಳ ಸಂಬಂಧಿಸಿಕೊಂಡು
ಪ್ರಾಣಲಿಂಗಸಾಹಿತ್ಯವಾದ ಕಾರಣ ಭಕ್ತರ ಶ್ರೀಚರಣಕ್ಕೆ
ನಮೋ ನಮೋ ಎನುತಿರ್ದೆ ಕಾಣಾ
ಗೊಹೇಶ್ವರಪ್ರಿಯ ನಿರಾಳಲಿಂಗ.
-ಗುಹೇಶ್ವರಯ್ಯ

































