ತೋಟಗಾರಿಕೆ ಬೆಳೆಗಳಿಗೆ ಫಸಲ್ ಬಿಮಾ ಯೋಜನೆ ನೋಂದಣಿ ಆರಂಭ

WhatsApp
Telegram
Facebook
Twitter
LinkedIn

 

ಚಿತ್ರದುರ್ಗ: 2026-27ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ತೋಟಗಾರಿಕಾ ಬೆಳೆಗಳಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ಬೆಳೆ ವಿಮೆ ನೊಂದಣಿ ಪ್ರಾರಂಭವಾಗಿದೆ.

ಜಿಲ್ಲೆಯಲ್ಲಿ ತೋಟಗಾರಿಕೆ ಬೆಳೆಗಳಾದ ಈರುಳ್ಳಿ ಮಳೆಯಾಶ್ರಿತ, ಈರುಳ್ಳಿ ನೀರಾವರಿ,  ಟೊಮ್ಯಾಟೋ ಹಾಗೂ ಕೆಂಪು ಮೆಣಸಿನಕಾಯಿ  ಮಳೆಯಾಶ್ರಿತ ಬೆಳೆಗಳಿಗೆ ವಿಮೆ ನೊಂದಣಿ ಮಾಡಬಹುದು.

ತೋಟಗಾರಿಕೆ ಬೆಳೆಗಳ ವಿವರ: 2026ರ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಚಿತ್ರದುರ್ಗ ಜಿಲ್ಲೆಗೆ ಅಧಿಸೂಚಿತ ತೋಟಗಾರಿಕೆ ಬೆಳೆಗಳ ವಿವರ ಇಂತಿದೆ. ಚಿತ್ರದುರ್ಗ ತಾಲ್ಲೂಕು ಕಸಬಾ, ತುರುವನೂರು ಹೋಬಳಿ (ಈರುಳ್ಳಿ ನೀರಾವರಿ, ಈರುಳ್ಳಿ ಮಳೆಯಾಶ್ರಿತ), ಹಿರೇಗುಂಟನೂರು ಹೋಬಳಿ (ಈರುಳ್ಳಿ ನೀರಾವರಿ)  ಭರಮಸಾಗರ ಹೋಬಳಿ (ಈರುಳ್ಳಿ ನೀರಾವರಿ, ಟೊಮೋಟೊ). ಚಳ್ಳಕೆರೆ ತಾಲ್ಲೂಕಿನ ಕಸಬಾ, ನಾಯಕನಹಟ್ಟಿ, ಪರುಶುರಾಂಪುರ ಹಾಗೂ ತಳಕು ಹೋಬಳಿಗೆ (ಈರುಳ್ಳಿ ನೀರಾವರಿ, ಟೊಮೋಟೊ) ಹಿರಿಯೂರು ತಾಲ್ಲೂಕು ಕಸಬಾ ಹೋಬಳಿ, ಐಮಂಗಲ, ಜೆ.ಜಿ.ಹಳ್ಳಿ, (ಈರುಳ್ಳಿ ನೀರಾವರಿ), ಧರ್ಮಪುರ ಹೋಬಳಿ (ಈರುಳ್ಳಿ ನೀರಾವರಿ, ಟೊಮೋಟೋ) , ಹೊಳಲ್ಕೆರೆ ತಾಲ್ಲೂಕು ರಾಮಗಿರಿ ಹೋಬಳಿ (ಈರುಳ್ಳಿ ನೀರಾವರಿ, ಈರುಳ್ಳಿ ಮಳೆಯಾಶ್ರಿತ), ತಾಳ್ಯ ಹೋಬಳಿ (ಈರುಳ್ಳಿ ನೀರಾವರಿ, ಹೊಸದುರ್ಗ ತಾಲ್ಲೂಕು ಕಸಬಾ ಹೋಬಳಿ ಈರುಳ್ಳಿ ಮಳೆಯಾಶ್ರಿತ, ಟೊಮೊಟೊ, ಕೆಂಪು ಮೆಣಸಿನಕಾಯಿ ಮಳೆಯಾಶ್ರಿತ, ಮೊಳಕಾಲ್ಮುರು ತಾಲ್ಲೂಕು ದೇವಸಮುದ್ರ ಹಾಗೂ ಕಸಬಾ ಹೋಬಳಿ (ಈರುಳ್ಳಿ ನೀರಾವರಿ, ಟೊಮೋಟೊ).

ವಿಮಾ ಕಂತಿನ ವಿವರ: ಟೊಮ್ಯಾಟೋ ಬೆಳೆಯ ವಿಮೆ ಮೊತ್ತ ಪ್ರತಿ ಹೆಕ್ಟೇರ್‍ಗೆ ರೂ.169800 ಇದ್ದು, ರೈತರ ವಿಮಾ ಕಂತು ರೂ.8490 ಆಗಿದೆ. ನೀರಾವರಿ ಈರುಳ್ಳಿ ವಿಮೆ ಮೊತ್ತ ಹೆಕ್ಟೇರ್‍ಗೆ ರೂ.93900 ಇದ್ದು, ರೈತರ ವಿಮಾ ಕಂತು ರೂ.4695 ಆಗಿದೆ. ಮಳೆ ಆಶ್ರಿತ ಈರುಳ್ಳಿ ವಿಮಾ ಮೊತ್ತ ಹೆಕ್ಟೇರ್‍ಗೆ ರೂ. 85600  ಆಗಿದ್ದು, ರೈತರ ಮಿಮಾ ಕಂತು ರೂ.4280 ಆಗಿದೆ. ಮಳೆ ಆಶ್ರಿತ ಕೆಂಪು ಮೆಣಸಿಕಾಯಿ ವಿಮಾ  ಮೊತ್ತ ಹೆಕ್ಟೇರ್‍ಗೆ ರೂ.90800 ಆಗಿದ್ದು, ರೈತರ ವಿಮಾ ಕಂತು 4540 ಆಗಿದೆ. ಅಧಿಸೂಚಿತ ಬೆಳೆಗಳ ವಿಮೆಯನ್ನು ಬ್ಯಾಂಕ್, ಸಾಮಾನ್ಯ ಸೇವಾ ಕೇಂದ್ರ, ಗ್ರಾಮ ಒನ್ ಕೇಂದ್ರ ಹಾಗೂ ಆರ್ಥಿಕ ಸಂಸ್ಥೆಗಳಲ್ಲಿ ನೊಂದಣಿ ಮಾಡಬಹುದು.

2026-27ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ವಿಮೆ ನೋಂದಣಿಗೆ ಜುಲೈ 31 ಕೊನೆಯ ದಿನವಾಗಿದೆ. ನೀರಾವರಿ ಆಶ್ರಿತ ಈರುಳ್ಳಿ ಬೆಳೆ ವಿಮೆ ನೊಂದಣಿಗೆ ಜುಲೈ 15 ಕಡೆಯ ದಿನ. ಇಫ್ಕೋ ಟೋಕಿಯೋ ಜನರಲ್ ಇನ್ಸೂರೆನ್ಸ್ ಕಂಪನಿಯನ್ನು ಜಿಲ್ಲೆಗೆ ನಿಗಧಿಪಡಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಅಥವಾ ಹತ್ತಿರದ ಬ್ಯಾಂಕುಗಳ ಅಧಿಕಾರಿಗಳಣ್ನು ಸಂಪರ್ಕಿಸಬಹುದು ಎಂದು ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

 

 

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon