ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಹೊಲಬುಗೆಟ್ಟ ಶಿಶು ತನ್ನ ತಾಯ ಬಯಸುವಂತೆ,
ಬಳಿದಪ್ಪಿದ ಪಶು ತನ್ನ ಹಿಂಡನರಸುವಂತೆ,
ಬಯಸುತ್ತಿರ್ದೆನಯ್ಯಾ ನಿಮ್ಮ ಶರಣರ ಬರವನು.
ಬಯಸುತ್ತಿರ್ದೆನಯ್ಯಾ ನಿಮ್ಮ ಭಕ್ತರ ಬರವನು.
ದಿನಕರನುದಯಕ್ಕೆ ಕಮಳ ವಿಕಸಿತವಾದಂತೆ
ಎನಗೆ ನಿಮ್ಮ ಶರಣರ ಬರವು, ಕೂಡಲಸಂಗಮದೇವಾ.
-ಬಸವಣ್ಣ

































