ಈ ಕಾರಣಕ್ಕೆ ಗಣಿ ಇಲಾಖೆಯಲ್ಲಿ ಮೇಜರ್ ಸರ್ಜರಿ ಶೇ.80ರಷ್ಟು ಸಿಬ್ಬಂದಿ ವರ್ಗಾವಣೆ.!

WhatsApp
Telegram
Facebook
Twitter
LinkedIn

 

ಬೆಂಗಳೂರು: ರಾಜ್ಯ ಗಣಿ ಇಲಾಖೆಗೆ ರಾಜ್ಯ ಸರ್ಕಾರ​ ಮೇಜರ್​​ ಸರ್ಜರಿ ಮಾಡಿದ್ದು, ಶೇ.80ರಷ್ಟು ಸಿಬ್ಬಂದಿಯನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ಮೂಲಕ ಇಲಾಖೆ ಅಧಿಕಾರಿ, ಸಿಬ್ಬಂದಿಗಳಿಗೆ ಶಾಕ್ ನೀಡಿದೆ.

ಹಲವು ವರ್ಷಗಳಿಂದ ಒಂದೇ ಸ್ಥಳದಲ್ಲಿ ಬೀಡು ಬಿಟ್ಟಿದ್ದ ಗಣಿ ಇಲಾಖೆಯ ಬರೋಬ್ಬರಿ 160 ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶಿ ಹೊರಡಿಸಿದೆ. ಇದರಲ್ಲಿ 131 ಭೂವಿಜ್ಞಾನಿಗಳು, 23 ಹಿರಿಯ ಭೂವಿಜ್ಞಾನಿಗಳು, 6 ಉಪನಿರ್ದೇಶಕರು ಸೇರಿದ್ದಾರೆ.

ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹೆಚ್ಚಿನ ಉಪ ನಿರ್ದೇಶಕರು ತಮ್ಮ ಸ್ವಂತ ಜಿಲ್ಲೆಗಳಲ್ಲಿ ಅಥವಾ ನೆರೆಯ ಜಿಲ್ಲೆಗಳಲ್ಲಿಯೇ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಒಂದೇ ಸ್ಥಳದಲ್ಲಿ ದೀರ್ಘಕಾಲದಿಂದ ಮುಂದುವರಿದಿದ್ದಾರೆ ಅಥವಾ ಆಡಳಿತಾತ್ಮಕ ಹಾಗೂ ಸಾರ್ವಜನಿಕ ದೂರುಗಳನ್ನು ಎದುರಿಸುತ್ತಿದ್ದಾರೆ. ಇಂತಹ ದೀರ್ಘಕಾಲದ ಕಾರ್ಯಾವಧಿಯು ಸ್ವಹಿತಾಸಕ್ತಿಗಳಿಗೆ ಎಡೆಮಾಡಿಕೊಡುತ್ತದೆ ಹಾಗೂ ಇಲಾಖೆಯ ಘನತೆಗೆ ಧಕ್ಕೆ ತರುವ ಕಾರಣ ಸ್ಥಳೀಯ ಮಟ್ಟದ ಏಕಸ್ವಾಮ್ಯವನ್ನು ಮುರಿಯಲು ಮತ್ತು ಸಾಂಖ್ಯಿಕ ಅಕ್ರಮಗಳನ್ನು ತಡೆಗಟ್ಟಲು, ಇಲಾಖೆಯ ಪ್ರಮುಖ ಆದಾಯ ಸಂಗ್ರಹಣಾ ಕಾರ್ಯಗಳಿಗೆ ಯಾವುದೇ ಅಡಚಣೆಯಾಗದಂತೆ, ವಸ್ತುನಿಷ್ಠತೆ, ಪಾರದರ್ಶಕತೆ ಮತ್ತು ಸಾರ್ವಜನಿಕ ಹೊಣೆಗಾರಿಕೆಯನ್ನು ಮರುಸ್ಥಾಪಿಸುವ ನಿಟ್ಟಿನಲ್ಲಿಈ ಕೂಡಲೇ ಜಾರಿಗೆ ಬರುವಂತೆ 160 ಅಧಿಕಾರಿಗಳನ್ನು ವರ್ಗಾವಣೆ ಮಾಡಿರೋದಾಗಿ ಆದೇಶದಲ್ಲಿ ತಿಳಿಸಲಾಗಿದೆ. ವರ್ಗಾಯಿಸಿದ ಹುದ್ದೆಗೆ ತಕ್ಷಣ ಕರ್ತವ್ಯಕ್ಕೆ ವರದಿ ಮಾಡಿಕೊಂಡು ಕೇಂದ್ರ ಕಚೇರಿಗೆ ಮಾಹಿತಿಯನ್ನು ನೀಡುವಂತೆ ಸೂಚಿಸಲಾಗಿದೆ.

 

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon