ಮಂಗಳೂರು: ಮನೆಯಲ್ಲಿ ತಂದೆ ಸೇದಿ ಎಸೆದಿದ್ದ ಬೀಡಿಯ ತುಂಡನ್ನು ನುಂಗಿ ಅಸ್ವಸ್ಥಗೊಂಡಿದ್ದ 10 ತಿಂಗಳ ಮಗುವೊಂದು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದೆ.
ಅಡ್ಯಾರ್ನಲ್ಲಿ ವಾಸವಿದ್ದ ಬಿಹಾರ ಮೂಲದ ದಂಪತಿಯ ಮಗು ಅನೀಶ್ ಕುಮಾರ್ ಮೃತ ಮಗು. ಶನಿವಾರ ಮಧ್ಯಾಹ್ನ 1.30ರ ವೇಳೆಗೆ ಘಟನೆ ಸಂಭವಿಸಿದೆ. ಅಸ್ವಸ್ಥಗೊಂಡಿದ್ದ ಮಗುವನ್ನು ಅಪರಾಹ್ನ 3.30ರ ವೇಳೆಗೆ ವೆಸ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದು, ವೈದ್ಯರು ಚಿಕಿತ್ಸೆ ನೀಡಿದ್ದಾರೆ. ಆದರೆ ರವಿವಾರ ಬೆಳಗ್ಗೆ 10.25ರ ವೇಳೆಗೆ ಚಿಕಿತ್ಸೆಗೆ ಸ್ಪಂದಿಸದೆ ಮಗು ಮೃತಪಟ್ಟಿದೆ.