ಮಂಗಳೂರು: ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಬೃಹತ್ ಮಾವಿನ ಮರವೊಂದು ನಿಲ್ಲಿಸಿದ್ದ ಕಾರಿನ ಮೇಲೆ ಬಿದ್ದ ಘಟನೆ ಕಡಬ ತಾಲೂಕಿನ ರಾಮಕುಂಜದಲ್ಲಿ ನಡೆದಿದೆ.
ಅಬ್ದುಲ್ ಸಲೀಂ ಎಂಬವರು ರಾಮಕುಂಜದ ರಸ್ತೆ ಬದಿ ತನ್ನ ಮಾರುತಿ 800 ಕಾರನ್ನು ನಿಲ್ಲಿಸಿ ಹೊರ ಹೋಗಿದ್ದರು. ಕಾರಿನಲ್ಲಿ ರಹಿಮಾನ್, ಅಬ್ಬಾಸ್ ಹಾಗೂ ರಮ್ಲಾನ್ ಕುಳಿತಿದ್ದರು. ಈ ವೇಳೆ ಮರ ಬೀಳುವ ಶಬ್ದ ಕೇಳಿ ಮೂವರು ಕಾರಿನಿಂದ ಇಳಿದು ದೂರ ಹೋಗಿದ್ದಾರೆ.
ಅಷ್ಟರಲ್ಲೇ ಮಾವಿನ ಮರ ಕಾರಿನ ಮೇಲೆ ಬಿದ್ದಿದೆ. ಕಾರು ಸಂಪೂರ್ಣ ಜಖಂಗೊಂಡು ಹಾನಿಯಾಗಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ನಾಲ್ವರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ