ಶ್ರೀನಗರ : ಜಮ್ಮು – ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಉರಿಯ ಚುರುಂಡಾ ಪ್ರದೇಶದಲ್ಲಿ ಭಯೋತ್ಪಾದಕರ ಒಳನುಸುಳುವಿಕೆ ಪ್ರಯತ್ನವನ್ನು ಭಾರತೀಯ ಸೇನಾ ಪಡೆಗಳು ವಿಫಲಗೊಳಿಸಿವೆ. ಆದರೆ ಈ ಸಂದರ್ಭ ನಡೆದ ಭೀಕರ ಗುಂಡಿನ ಚಕಮಕಿಯಲ್ಲಿ ಒಬ್ಬ ಸೈನಿಕ ಹುತಾತ್ಮನಾಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ದಾಳಿಕೋರರನ್ನು ಪತ್ತೆಹಚ್ಚಲು ಪ್ರದೇಶದಲ್ಲಿ ಒಳನುಸುಳುವಿಕೆ ನಿಗ್ರಹ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ. ಗುಂಡಿನ ಚಕಮಕಿ ನಡೆಯುತ್ತಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ಆ.11 ರಂದು, ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯ ಅಂತರರಾಷ್ಟ್ರೀಯ ಗಡಿಯ ಬಳಿ ಅನುಮಾನಾಸ್ಪದ ಚಲನವಲನಗಳನ್ನು ಬಿಎಸ್ಎಫ್ ಸಿಬ್ಬಂದಿ ಗಮನಿಸಿದ್ದಾರೆ. ಈ ವೇಳೆ ಪಾಕಿಸ್ತಾನಿ ಒಳ ನುಸುಳುಕೋರನಿಗೆ ಬಿಎಸ್ಎಫ್ ಸಿಬ್ಬಂದಿ ಗುಂಡು ಹಾರಿಸಿದ್ದು, ಬಳಿಕ ಗಾಯಗೊಂಡ ಆತನನ್ನು ಬಂಧಿಸಲಾಗಿತ್ತು.