ಬೀದಿ ನಾಯಿಗಳನ್ನ ಹಿಡಿದು ಸಂತಾನಹರಣ ಶಸ್ತ್ರಚಿಕಿತ್ಸೆ ಬಳಿಕ ಬಿಡುಗಡೆ: ಸುಪ್ರೀಂ ತೀರ್ಪಿನಲ್ಲಿ ಮಹತ್ವದ ತಿದ್ದುಪಡಿ

WhatsApp
Telegram
Facebook
Twitter
LinkedIn

ನವದೆಹಲಿ : ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೀದಿ ನಾಯಿಗಳನ್ನು ಶಾಶ್ವತವಾಗಿ ಆಶ್ರಯ ತಾಣಗಳಿಗೆ ಸ್ಥಳಾಂತರಿಸಬೇಕೆಂಬ ಹಿಂದಿನ ತೀರ್ಪನ್ನು ಸುಪ್ರೀಂ ಕೋರ್ಟ್ ತಿದ್ದುಪಡಿ ಮಾಡಿದೆ. ಬೀದಿ ನಾಯಿಗಳನ್ನು ಹಿಡಿದು, ಸಂತಾನಹರಣ ಶಸ್ತ್ರಚಿಕಿತ್ಸೆ ಬಳಿಕ ಅವುಗಳನ್ನು ಬಿಡುಗಡೆ ಮಾಡಿ, ಆಕ್ರಮಣಕಾರಿ, ಅನಾರೋಗ್ಯ ಇರುವ ನಾಯಿಗಳನ್ನು ಮಾತ್ರ ಶೆಡ್‌ಗಳಿಗೆ ಸ್ಥಳಾಂತರಿಸುವಂತೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೋರ್ಟ್ ನಿರ್ದೇಶನ ನೀಡಿದೆ.

ಬೀದಿ ನಾಯಿಗಳಿಗೆ ಸಾರ್ವಜನಿಕವಾಗಿ ಆಹಾರ ನೀಡುವುದಕ್ಕೆ ಸುಪ್ರೀಂ ನಿಷೇಧ ಹೇರಿದೆ. ನಿಮಯ ಉಲ್ಲಂಘಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿಯೂ ಎಚ್ಚರಿಸಿದೆ. ಸಾರ್ವಜನಿಕವಾಗಿ ಅವುಗಳಿಗೆ ಆಹಾರ ನೀಡುವುದಕ್ಕೆ ಅನುಮತಿಯಿಲ್ಲ, ಪ್ರತ್ಯೇಕ ಮೀಸಲಾದ ಆಹಾರ ಸ್ಥಳಗಳನ್ನ ರಚಿಸಲಾಗುವುದು, ಅಲ್ಲಿ ಮಾತ್ರ ಆಹಾರ ನೀಡಬೇಕು ಎಂದು ಕೋರ್ಟ್ ಸೂಚನೆ ನೀಡಿದೆ.

ನ್ಯಾ. ವಿಕ್ರಮ್ ನಾಥ್, ನ್ಯಾ. ಸಂದೀಪ್ ಮೆಹ್ತಾ ಮತ್ತು ನ್ಯಾ. ಎನ್.ವಿ ಅಂಜಾರಿಯಾ ನೇತೃತ್ವದ ತ್ರಿಸದಸ್ಯ ಪೀಠವು ಈ ಆದೇಶ ಪ್ರಕಟಿಸಿದ್ದು, ಆಗಸ್ಟ್ 11ರಂದು ಹೊರಡಿಸಿದ್ದ ತೀರ್ಪಿನಲ್ಲಿ ತಿದ್ದುಪಡಿ ಮಾಡಿದೆ. ನ್ಯಾ. ಪಾರ್ದಿವಾಲಾ ಪೀಠದ ಆದೇಶಕ್ಕೆ ಶ್ವಾನಪ್ರಿಯರಿಂದ ಅಸಮಾಧಾನ ವ್ಯಕ್ತವಾದ ಹಿನ್ನೆಲೆ ಪ್ರಕರಣ ವಿಚಾರಣೆಯನ್ನ ತ್ರಿಸದಸ್ಯ ಪೀಠಕ್ಕೆ ವರ್ಗಾಯಿಸಲಾಗಿತ್ತು.

ಬೀದಿ ನಾಯಿಗಳನ್ನು ಶಾಶ್ವತವಾಗಿ ಆಶ್ರಯ ತಾಣಗಳಿಗೆ (ಶೆಡ್) ಸ್ಥಳಾಂತರಿಸಬೇಕು ಎಂದು ಈ ಹಿಂದೆ ಸುಪ್ರೀಂ ಕೋರ್ಟ್ ಆದೇಶಿಸಿತ್ತು. ಇದೀಗ ಅನಾರೋಗ್ಯ ಮತ್ತು ಆಕ್ರಮಣಕಾರಿ ಬೀದಿ ನಾಯಿಗಳನ್ನು ಮಾತ್ರ ಆಶ್ರಯ ತಾಣಗಳಲ್ಲಿ ಇರಿಸುವಂತೆ ಸೂಚಿಸಿದೆ. ಉಳಿದ ನಾಯಿಗಳನ್ನು ಹಿಡಿದು, ಸಂತಾನಹರಣ ಚಿಕಿತ್ಸೆ, ಜಂತುಹುಳು ನಿವಾರಣಾ ಲಸಿಕೆ ಹಾಕಿದ ಬಳಿಕ ಅವುಗಳನ್ನು ಹಿಡಿದ ಪ್ರದೇಶದಲ್ಲೇ ಬಿಡುವಂತೆ ತೀರ್ಪು ನೀಡಿದೆ.

ಜೊತೆಗೆ ರೇಬೀಸ್ ಅಥವಾ ಅನಾರೋಗ್ಯವುಳ್ಳ ನಾಯಿಗಳು ಹಾಗೂ ಆಕ್ರಮಣಕಾರಿ ನಾಯಿಗಳನ್ನ ಮಾತ್ರ ಲಸಿಕೆ ಹಾಕಿ ಪ್ರತ್ಯೇಕ ಆಶ್ರಯತಾಣಗಳಲ್ಲಿ ಇರಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದೆ.

ನಾಯಿಗಳನ್ನು ದತ್ತು ಪಡೆಯಲು ಬಯಸುವ ಸಾರ್ವಜನಿಕರು ಅರ್ಜಿ ಸಲ್ಲಿಸಲು ಕೋರ್ಟ್ ಅವಕಾಶ ನೀಡಿದೆ. ದತ್ತು ಪಡೆದ ನಾಯಿಗಳನ್ನು ಮರಳಿ ಬೀದಿಗಳಿಗೆ ಹಿಂತಿರುಗಿಸದಂತೆ ನೋಡಿಕೊಳ್ಳುವುದು ಅವರ ಜವಾಬ್ದಾರಿ. ಅದಕ್ಕಾಗಿ ಪ್ರತಿ ಅರ್ಜಿದಾರ 25,000 ರೂ. ಮತ್ತು ಎನ್‌ಜಿಒಗಳು 2 ಲಕ್ಷ ರೂ. ಠೇವಣಿ ಇಡಬೇಕು. ಮುಖ್ಯವಾಗಿ ಈ ಕುರಿತು ರಾಷ್ಟ್ರೀಯ ನೀತಿ ರೂಪಿಸುವಂತೆ ನಿರ್ದೇಶಿಸಿತು

 

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon