Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ

0

 

ಚಿತ್ರದುರ್ಗ: 2023-24ನೇ ಸಾಲಿಗಾಗಿ ಒಂದನೇ ತರಗತಿಯಿಂದ ಅಂತಿಮ ಪದವಿ, ಡಿಪ್ಲೋಮಾ ಮತ್ತು ವೃತ್ತಿಪರ ಪದವಿವರೆಗೆ ಕರ್ನಾಟಕದಲ್ಲಿರುವ ಹಾಗೂ ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕದ ಮೂಲ ನಿವಾಸಿ ಮಿಲಿಟರಿ ಪಿಂಚಣಿದಾರ ಮಾಜಿ ಸೈನಿಕರ ಮಕ್ಕಳಿಗೆ (ಅಧಿಕಾರಿಗಳನ್ನು ಹೊರತುಪಡಿಸಿ) ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಶುಲ್ಕ ರಹಿತ ಅರ್ಜಿಗಳನ್ನು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಕಛೇರಿಯಿಂದ ಪಡೆದು 1ನೇ ತರಗತಿಯಿಂದ ಅಂತಿಮ ಪದವಿ, ಡಿಪ್ಲೋಮಾ ದವರೆಗೆ ವ್ಯಾಸಂಗ ಮಾಡುತ್ತಿರುವವರು ಭರ್ತಿ ಮಾಡಿದ ಅರ್ಜಿಗಳನ್ನು ಕೊನೆಯ ದಿನಾಂಕ 30-09-2023 ಹಾಗೂ ವೃತ್ತಿಪರ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವವರಿಗೆ ಭರ್ತಿ ಮಾಡಿದ ಅರ್ಜಿಗಳನ್ನು ಕೊನೆಯ ದಿನಾಂಕ 30-10-2023 ರೊಳಗಾಗಿ ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಕಛೇರಿಗೆ ಸಲ್ಲಿಸಲು ಕೋರಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಕಛೇರಿಯ ದೂರವಾಣಿ ಸಂಖ್ಯೆ 08182-220925 ಗೆ ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave A Reply

Your email address will not be published.