ಜಾತಿಗಣತಿಯನ್ನು ಅಡ್ಡ ಇಟ್ಟು ಜನರ ಗಮನವನ್ನು ಬೇರೆಡೆ ಸೆಳೆಯಲು ಪ್ರಯತ್ನ: ಛಲವಾದಿ ನಾರಾಯಣಸ್ವಾಮಿ.!

WhatsApp
Telegram
Facebook
Twitter
LinkedIn

 

ಚಿತ್ರದುರ್ಗ : ಆರ್ಸಿಬಿ ವಿಜಯೋತ್ಸವ ವೇಳೆ ಸಂಭವಿಸಿದ ಕಾಲ್ತುಳಿತ ಮತ್ತು 11ಸಾವಿಗೆ ಸಂಬಂಧಿಸಿ ರಾಷ್ಟ್ರೀಯ ಕಾಂಗ್ರೆಸ್ ಸಮಿತಿಯಿಂದ (ಎಐಸಿಸಿ) ಸಿಎಂ, ಡಿಸಿಎಂ ತಲೆದಂಡದ ನಿರೀಕ್ಷೆಯಲ್ಲಿದ್ದೆವು. ಅದರ ಬದಲಾಗಿ ಜಾತಿಗಣತಿಯನ್ನು ಅಡ್ಡ ಇಟ್ಟು ಜನರ ಗಮನವನ್ನು ಬೇರೆಡೆ ಸೆಳೆಯಲು ಕಾಂಗ್ರೆಸ್ ಪಕ್ಷ ಪ್ರಯತ್ನಿಸುತ್ತಿದೆ ಎಂದು ರಾಜ್ಯ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ.

ಚಿತ್ರದುರ್ಗದ ಪ್ರವಾಸಿ ಮಂದಿರದಲ್ಲಿ ಗುರುವಾರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದ ಕಾಂಗ್ರೆಸ್ ಸರ್ಕಾರ ಆರ್.ಸಿ.ಬಿ ಗೆಲುವಿನ ಪ್ರಯೋಜನ ಪಡೆಯಲು ಪಂದ್ಯಾಟವನ್ನು ಗೆಲ್ಲುವ ಮೊದಲೇ ಸಂಭ್ರಮಾಚರಣೆಗೆ ಅನುಮತಿ ಪಡೆದಿತ್ತು. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಹತ್ತಿರ 11 ಜನ ಅಮಾಯಕರನ್ನು ಸರ್ಕಾರವೇ ಕೊಲೆ ಮಾಡಿರುವುದು ಆರ್ಸಿಬಿ ತಂಡಕ್ಕೂ ಯಾವುದೇ ಸಂಬಂಧ ಇಲ್ಲದೇ ಇದ್ದರೂ ಕೂಡ ಕ್ರೇಡಿಟ್ ಪಡೆಯುವ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿಧಾನಸೌದದ ಮೆಟ್ಟಲ ಮೇಲೆ ಆರ್ಸಿಬಿ ಆಟಗಾರರಿಗೆ ಸನ್ಮಾನ ಮಾಡುತ್ತೇವೆ ಅಲ್ಲಿಗೆ ಎಲ್ಲಾ ಜನರಿಗೂ ಫ್ರೀ ಎಂಟ್ರಿ ಎಂದು ಜನರನ್ನು ಕರೆದು 11 ಜನ ಅಮಾಯಕರನ್ನು ಸರ್ಕಾರವೇ ಕೊಲೆ ಮಾಡಿದೆ.

ನೈತಿಕತೆ ಇದ್ದಿದ್ದರೆ ಅಂದೇ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ರಾಜೀನಾಮೆ ಕೊಟ್ಟು ಹೋಗುತ್ತಿದ್ದರು. ಆದರೆ ನಾಚಿಕೆ ಮಾನ ಮರ್ಯಾದೆ ಎಂಬುದೇ ಇಲ್ಲದಂತೆ ಪೊಲೀಸರ ಮೇಲೆ ಗೂಬೆ ಕೂರಿಸಿ ಅಮಾನತ್ತು ಮಾಡಿದ್ದಾರೆ ಇದು ಯಾವ ನ್ಯಾಯ ಎಂದು ಪ್ರಶ್ನಿಸಿದ್ದಾರೆ.

ಹೈಕಮಾಂಡ್ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಮೇಲೆ ಕ್ರಮ ಕೈಗೊಳ್ಳುವುದು ಬಿಟ್ಟು, ಸರ್ಕಾರಕ್ಕೆ ಉಪಾಯ ಹೇಳಿಕೊಟ್ಟಿದ್ದಾರೆ. 11 ಜನರ ಸಾವಿನ ಪ್ರಕರಣ ಮರೆಮಾಚಲು ಮರು ಜಾತಿಜನಗಣತಿ ಮಾಡುವುದಾಗಿ ಹೇಳಿ ಎಂದಿದ್ದಾರೆ. ಇದ ಯಾವ ಸೀಮೆ ನ್ಯಾಯಾ ? ಹೈಕಮಾಂಡ್ನಲ್ಲಿಯೂ ಯಾರು ಕೂಡ ನ್ಯಾಯವಂತವರಿಲ್ಲ ಎಂಬುದು ತಿಳಿಯುತ್ತದೆ. ಇದಕ್ಕೆ ಜನರು ಸೂಕ್ತ ಉತ್ತರ ಕೊಡಲಿದ್ದಾರೆ ಎಂದು ಗುಡುಗಿದ ಅವರು.ಸಂವಿಧಾನದ ಪ್ರಕಾರ ಕೆಲಸ ಮಾಡುವುದನ್ನು ಬಿಟ್ಟು, ಹೈಕಮಾಂಡ್ ಹೇಳಿದಂತೆ ಕೆಲಸ ಮಾಡುತ್ತಿದ್ದಾರೆ. ಇದಕ್ಕೆನಾ ಜನರು ನಿಮ್ಮನ್ನು ಅಯ್ಕೆ ಮಾಡಿದ್ದು ಎಂದು ಪ್ರಶ್ನಿಸಿದರು.

ಸಬಕ್ ಸಾಥ್ ಸಬಕ್ ವಿಕಾಸ್ ಎಂಬ ಘೋಷ ವಾಕ್ಯದೊಂದಿಗೆ ಮುನ್ನಡೆಯುತ್ತಿದ್ದಾರೆ.ಬಡತನ ರೇಖೆಗಿಂತ ದೇಶ ಮೇಲೆಳುತ್ತಿದೆ. ನಮ್ಮ ಸ್ಥಿತಿಗತಿ ಬದಲಾಗುತ್ತಿದೆ. ವಿರೋಧ ಪಕ್ಷಗಳು ಸತ್ಯವನ್ನು ಮರೆಮಾಚಿ ಆರೋಪಗಳನ್ನು ಮಾಡುತ್ತಾರೆ. ಇದನ್ನು ಯಾರೂ ಕೂಡ ಒಪ್ಪುವುದಿಲ್ಲ.ಸಿದ್ದರಾಮಯ್ಯ ಮೋದಿ ಸೇವೆಗೆ ಶೂನ್ಯ ಎಂಬ ಅಂಕ ಕೊಟ್ಟಿದ್ದಾರೆ. ದೇಶದ ಜನ ಆ ಶೂನ್ಯ ಸೇರಿಸಿಕೊಂಡು ದೇಶದ ಹಿರೋ ಎಂದಿದ್ದಾರೆ. ಅವರಿಗೆ ಅಂಕಗಳನ್ನೆ ಕೊಡಲು ಆಗುವುದಿಲ್ಲ ಎಂದು ಛಲವಾದಿ ನಾರಾಯಣಸ್ವಾಮಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಕುಮಾರಸ್ವಾಮಿ, ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ, ಎಸ್.ಕೆ.ಬಸವರಾಜನ್, ಮುರುಳಿ, ಸುರೇಶ್ ಸಿದ್ದಾಪುರ, ಜಯಪಾಲ್ ವಕ್ತಾರರಾದ ನಾಗರಾಜ್ ಬೇದ್ರೇ, ದಗ್ಗೆ ಶಿವಪ್ರಕಾಶ್, ಶಿವಪುತ್ರಪ್ಪ, ಮೋಹನ್, ರಾಮದಾಸ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

 

 

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon