ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಪಾಲಿಗೆ ಜಾಮೀನು ದೂರದ ಬೆಟ್ಟವಾಗ್ತಿದೆ. ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯದಲ್ಲಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಕ್ತಾಯವಾಗಿದೆ.. ವಾದ ಪ್ರತಿವಾದ ಅಂತ್ಯವಾಗಿದ್ದು, ನ್ಯಾಯಾಧೀಶ ಜೈಶಂಕರ್ ಅವರು ತೀರ್ಪನ್ನು ಅಕ್ಟೋಬರ್ 14ಕ್ಕೆ ಕಾಯ್ದಿರಿಸಿದ್ದಾರೆ..