Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

BREAKING NEWS: ನೂತನ ಸ್ಪೀಕರ್‌ ಯು.ಟಿ ಖಾದರ್‌ ಅಧಿಕಾರ ಸ್ವೀಕಾರ

0

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಯು.ಟಿ ಖಾದರ್‌ ಫರೀದ್‌ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು. ಯು.ಟಿ ಖಾದರ್ ಅವರ ಹೆಸರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರುಸೂಚಿಸಿದರು. ಇದಕ್ಕೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರು ಅನುಮೋದಿಸಿದರು.

ಸ್ಪೀಕರ್‌ ಸ್ಥಾನಕ್ಕೆ ಯು.ಟಿ ಖಾದರ್‌ ಅವರು ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ, ಸರ್ವಾನುಮತದಿಂದ ಆಯ್ಕೆಯಾದರು. ಹಂಗಾಮಿ ಸ್ಪೀಕರ್‌ ಆರ್‌.ವಿ ದೇಶಪಾಂಡೆ ಅವರ ಆದೇಶ ಅನುಸಾರ, ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ಪೀಕರ್ ಪೀಠ ಬಳಿಗೆ ಯುಟಿ ಖಾದರ್‌ ಅವರನ್ನು ಕರೆತಂದರು. ಬಳಿಕ ಶುಭಾಶಯ ಕೋರಲಾಯ್ತು.

‘ಪಠ್ಯ ಪುಸ್ತಕಗಳ ಪರಿಷ್ಕರಣೆ ಬಗ್ಗೆ ಸಂಪುಟ ಸಭೆಯಲ್ಲಿ ತೀರ್ಮಾನ’ – ಸಿಎಂ ಸಿದ್ದು

ಬಳಿಕ ಸಿದ್ದರಾಮಯ್ಯ ಹಾಗೂ ಬಸವರಾಜ ಬೊಮ್ಮಾಯಿ ಅವರು ಅಭಿನಂದನಾ ಭಾಷಣ ಮಾಡಿ, ನೂತನ ಸ್ಪೀಕರ್‌ಗೆ ಶುಭಾಶಯ ಕೋರಿದರು. ಇದಕ್ಕೂ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನೂತನ ಸಚಿವರನ್ನು ಸದನಕ್ಕೆ ಪರಿಚಯ ಮಾಡಿಕೊಟ್ಟರು.

Leave A Reply

Your email address will not be published.