ಕಾರವಾರ : ಖಾಸಗಿ ಬಸ್ಸೊಂದು ಲಾರಿಗೆ ಡಿಕ್ಕಿಯಾಗಿ ಪ್ರಪಾತದ ಬಳಿ ಪಲ್ಟಿಯಾಗಿದ್ದು, ಅದೃಷ್ಟವಶಾತ್ 25 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರೆಬೈಲ್ ಘಟ್ಟದಲ್ಲಿ ನಡೆದಿದೆ.
ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಲಾರಿಗೆ ಡಿಕ್ಕಿಯಾಗಿ ಅಪಘಾತಕ್ಕೀಡಾಗಿದೆ. ಇಂದು ಬೆಳಗ್ಗೆ ಬೆಂಗಳೂರಿನಿಂದ 25 ಪ್ರಯಾಣಿಕರನ್ನು ಗೋವಾದ ಕಡೆ ಕರೆದೊಯ್ಯುತ್ತಿದ್ದ ಬಸ್ ಅರೆಬೈಲ್ ಘಟ್ಟದಲ್ಲಿ ಚಾಲಕನ ನಿರ್ಲಕ್ಷ್ಯದಿಂದ ಲಾರಿಗೆ ಡಿಕ್ಕಿಯಾಗಿ ಪಲ್ಟಿಯಾಗಿದೆ.
ಈ ವೇಳೆ ಬಸ್ ಪ್ರಪಾತಕ್ಕೆ ಬೀಳದೆ ಅದೃಷ್ಟವಶಾತ್ ಅರ್ಧದಲ್ಲೇ ನಿಂತಿದೆ. ಘಟನೆಯಲ್ಲಿ 25 ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಬಚಾವ್ ಆಗಿದ್ದಾರೆ. ಈ ಬಗ್ಗೆ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.