ಸ್ವತಂತ್ರ ಲಿಂಗಾಯತ ಧರ್ಮದ ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ, ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.ಸ
https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.
ವಚನ: : ಭವಿ ಭಕ್ತನಾದರೇನಯ್ಯಾ ಪೂರ್ವಾಶ್ರಯವಳಿಯದನ್ನಕ್ಕ ?
ವೇಶಿ ಭಕ್ತೆಯಾದರೇನಯ್ಯಾ ಎಂಜಲ ತಿಂಬುದ ಬಿಡದನ್ನಕ್ಕ ?
ಅರಸು ಭಕ್ತನಾದರೇನಯ್ಯಾ, ಅಹಂಕಾರವಳಿಯದನ್ನಕ್ಕ ?
ಇಂತೀ ಮೂವರಿಗೆ ಲಿಂಗವ ಕೊಟ್ಟಾತ ವ್ಯವಹಾರಿ, ಕೊಂಡಾತ ಲಾಭಗಾರ
ಇವರ ಭಕ್ತಿಯೆಂಬುದು,
ಒಕ್ಕಲಗಿತ್ತಿ ಹೊಸ್ತಿಲ ಪೂಜೆಯ ಮಾಡಿ, ಇಕ್ಕಾಲಿಕ್ಕಿ ದಾಟಿದಂತಾಯಿತ್ತು.
ಹಟ್ಟಿಯ ಹೊರಗೆ ಬೆನವನ ಪೂಜೆಯ ಮಾಡಿ
ತಿಪ್ಪೆಯೊಳಗೆ ಬಿಟ್ಟಂತಾಯಿತ್ತು.
ಜಂಗಮದ ಪೂಜೆಯ ಮಾಡಿ ನೈಷ್ಠೆಯಿಲ್ಲದ ಭ್ರಷ್ಟರ ಮೆಚ್ಚುವನೆ
ಕೂಡಲಚೆನ್ನಸಂಗಮದೇವ ?
-ಚೆನ್ನಬಸವಣ್ಣ