ಉತ್ತರ ಪ್ರದೇಶದ ಶಾಲೆ, ಕಾಲೇಜುಗಳಲ್ಲಿ ವಂದೇ ಮಾತರಂ ಗೀತೆ ಕಡ್ಡಾಯ: ಸಿಎಂ ಯೋಗಿ ಆದಿತ್ಯನಾಥ್ ಘೋಷಣೆ

WhatsApp
Telegram
Facebook
Twitter
LinkedIn

ಲಕ್ನೋ : ಉತ್ತರ ಪ್ರದೇಶದ ಶಾಲೆ, ಕಾಲೇಜುಗಳಲ್ಲಿ ವಂದೇ ಮಾತರಂ ಗೀತೆ ಹಾಡುವುದು ಕಡ್ಡಾಯ ಎಂದು ಸಿಎಂ ಯೋಗಿ ಆದಿತ್ಯನಾಥ್ ಘೋಷಣೆ ಮಾಡಿದ್ದಾರೆ.

ಗೋರಖ್‌ಪುರದಲ್ಲಿ ನಡೆದ ‘ಏಕತಾ ಯಾತ್ರೆ’ ಮತ್ತು ವಂದೇ ಮಾತರಂ ಸಾಮೂಹಿಕ ಗಾಯನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಉತ್ತರ ಪ್ರದೇಶದ ಪ್ರತಿಯೊಂದು ಶಾಲೆ ಮತ್ತು ಶಿಕ್ಷಣ ಸಂಸ್ಥೆಯಲ್ಲಿ ನಾವು ವಂದೇ ಮಾತರಂ ಗೀತೆ ಹಾಡುವುದನ್ನು ಕಡ್ಡಾಯಗೊಳಿಸುತ್ತೇವೆ. ರಾಷ್ಟ್ರದ ಬಗ್ಗೆ ಗೌರವ ಮತ್ತು ಹೆಮ್ಮೆಯ ಭಾವನೆ ಮೂಡಿಸುವ ಗುರಿಯಿಂದ ಈ ಕ್ರಮ ಜಾರಿ ಮಾಡಲಾಗುವುದು” ಎಂದು ಹೇಳಿದರು.

“ವಂದೇ ಮಾತರಂ ಗೀತೆಯನ್ನು ಸಮಾಜವಾದಿ ಪಕ್ಷದ ಸಂಸದರೊಬ್ಬರು ಟೀಕಿಸಿದ್ದ ವಿಚಾರವಾಗಿ ಇದೇ ವೇಳೆ ಅವರು ಅಸಮಾಧಾನ ಹೊರಹಾಕಿದರು. ಭಾರತದ ಸಮಗ್ರತೆಯ ಶಿಲ್ಪಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮ ದಿನಾಚರಣೆಯನ್ನು ತಪ್ಪಿಸಿಕೊಂಡು, ಜಿನ್ನಾ ಅವರನ್ನು ಗೌರವಿಸುವ ಕಾರ್ಯಕ್ರಮಗಳಿಗೆ ನಾಚಿಕೆಯಿಲ್ಲದೆ ಹಾಜರಾಗುವವರು ಅಂಥವರು. ಯಾರಾದರೂ ರಾಷ್ಟ್ರದ ಸಮಗ್ರತೆಯನ್ನು ಪ್ರಶ್ನಿಸಲು ಧೈರ್ಯ ಮಾಡಿದರೆ, ಅಂತವರ ಉದ್ದೇಶ ಬೇರೂರುವ ಮೊದಲು ನಾವು ಅದನ್ನು ಹೂತುಹಾಕಬೇಕು” ಎಂದು ಕರೆ ನೀಡಿದರು.

“1896 ರಿಂದ 1922 ರವರೆಗೆ, ಪ್ರತಿ ಕಾಂಗ್ರೆಸ್ ಅಧಿವೇಶನದಲ್ಲಿ ವಂದೇ ಮಾತರಂ ಹಾಡಲಾಗುತ್ತಿತ್ತು, ಆದರೆ 1923 ರಲ್ಲಿ, ಜೌಹರ್ ಕಾಂಗ್ರೆಸ್ ಅಧ್ಯಕ್ಷರಾದಾಗ, ಹಾಡು ಪ್ರಾರಂಭವಾದ ತಕ್ಷಣ ಅವರು ಹೊರನಡೆದರು. ಮತ್ತೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವರು ನಿರಾಕರಿಸಿದ್ದರು. ವಂದೇ ಮಾತರಂಗೆ ವ್ಯಕ್ತವಾದ ವಿರೋಧ ಭಾರತದ ವಿಭಜನೆಯ ದುರದೃಷ್ಟಕರ ಕಾರಣಗಳಲ್ಲಿ ಒಂದಾಯಿತು” ಎಂದರು.

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon