ಬೆಂಗಳೂರು: ಶಿಗ್ಗಾಂವಿ ಕ್ಷೇತ್ರದಿಂದಲೇ ಈ ಬಾರಿಯೂ ಸ್ಪರ್ಧೆ ಮಾಡುತ್ತೇನೆ. ಯಾವುದೇ ಕಾರಣಕ್ಕೂ ಕ್ಷೇತ್ರ ಬದಲಾವಣೆ ಮಾಡುವುದಿಲ್ಲ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ಶಿಕ್ಷಣ, ಆರೋಗ್ಯಕ್ಕೆ ನಮ್ಮ ಸರ್ಕಾರ ವಿಶೇಷ ಆದ್ಯತೆ ನೀಡಿದೆ. ದುಡ್ಡೇ ದೊಡ್ಡಪ್ಪ ಬದಲಾಗಿ, ದುಡಿಮೆಯೇ ದೊಡ್ಡಪ್ಪ ಆಗಿದೆ.
ನಾವು ಮಾಡಿದ ಸಾಧನೆಯ ರಿಪೋರ್ಟ್ ಹಿಡಿದು ಮತ ಕೇಳುತ್ತಿದ್ದೇವೆ. ಕಾಂಗ್ರೆಸ್ ಪಕ್ಷದ ದುರಾಡಳಿತದ ಬಗ್ಗೆಯೂ ಜನರಿಗೆ ತಿಳಿಸುತ್ತೇವೆ ಎಂದಿದ್ದಾರೆ.