ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಹಿಂಸಾಚಾರ ಆಗುತ್ತದೆ ಎಂದು ಹೇಳುವ ಮೂಲಕ ಕೇಂದ್ರ ಸಚಿವ ಅಮಿತ್ ಶಾ ಮತದಾರರಿಗೆ ಬೆದರಿಕೆ ಒಡ್ಡಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿದಂತೆ ಹೈಗ್ರೌಂಡ್ ಠಾಣೆಯಲ್ಲಿ ದೂರು ಸಲ್ಲಿಸಲಾಗಿದೆ.!
ಬೆಂಗಳೂರಿನ ಹೈಗ್ರೌಂಡ್ ಠಾಣೆಗೆ ಸುರ್ಜೇವಾಲಾ, ಡಿಕೆಶಿ ದೂರು ಸಲ್ಲಿಸಿದ್ದಾರೆ. ಈ ವೇಳೆ ಮಾತನಾಡಿದ ಡಿಕೆಶಿ, ಅಮಿತ್ ಶಾ ಆಧಾರರಹಿತ ಆರೋಪ ಮಾಡಿ, ಕಾಂಗ್ರೆಸ್ಗೆ ಯಾರೂ ಮತ ಹಾಕಬಾರದೆಂದು ಹೆದರಿಸುವ ಪ್ರಯತ್ನ ಮಾಡಿದ್ದಾರೆ. ಈ ರೀತಿ ಬೆದರಿಕೆ ಹಾಕುವುದು ಎಷ್ಟು ಸರಿ? ಎಂದು ಪ್ರಶ್ನಿಸಿದ್ದಾರೆ.