Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಕಾಂಗ್ರೆಸ್ ಅಭ್ಯರ್ಥಿ ಅಪ್ಪ-ಅಮ್ಮ ಇಬ್ಬರನ್ನು ಕಳೆದುಕೊಂಡ ಆರ್​.ಧ್ರುವನಾರಾಯಣ ಮಗ.!

0

 

ಮೈಸೂರು: ತಂದೆ ಆರ್​.ಧ್ರುವನಾರಾಯಣ ಅಕಾಲಿಕ ಸಾವಿನಿಂದ ಕಂಗಾಲಾಗಿದ್ದ ದರ್ಶನ್ ಮತ್ತು ಧೀರನ್ ಅವರಿಗೆ ಈಗ ತಾಯಿ ನಿಧನ ಬರಸಿಡಿಲಿನಂತೆ ಬಡಿದಿದೆ.

ತಂದೆ ಆರ್​.ಧ್ರುವನಾರಾಯಣ ಸಾವಿನ ಬಳಿಕ ಸ್ವಲ್ಪಮಟ್ಟಿಗೆ ಚೇತರಿಸಿಕೊಂಡು ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದ ನಂಜನಗೂಡು ಕಾಂಗ್ರೆಸ್ ಅಭ್ಯರ್ಥಿ ದರ್ಶನ್ ಅವರು ಈಗ ತಾಯಿ ವೀಣಾರನ್ನು ಕಳೆದುಕೊಂಡಿದ್ದಾರೆ.

ಕೆಪಿಸಿಸಿ ಕಾರ್ಯಧ್ಯಕ್ಷರಾಗಿದ್ದ ಆರ್​​.ಧ್ರುವನಾರಾಯಣ ನಿಧನರಾಗಿ ತಿಂಗಳೊಳಗೆ ಪತ್ನಿ ವೀಣಾ ಧ್ರುವನಾರಾಯಣ್  ಸಾವನ್ನಪ್ಪಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ವೀಣಾ ಧ್ರುವನಾರಾಯಣ್ ಅವರು ಇಂದು (ಏಪ್ರಿಲ್ 07) ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ದರ್ಶನ್​ ಅವರು ತಂದೆ ಬೆನ್ನಲ್ಲೇ ಇದೀಗ ತಾಯಿಯನ್ನೂ ಕಳೆದುಕೊಂಡಿದ್ದಾರೆ.    !

Leave A Reply

Your email address will not be published.