ಕುಂಭಮೇಳದಲ್ಲಿ ಚಿತ್ರದುರ್ಗದ ಓರ್ವರು ಬಲಿ ಸುದ್ದಿ ಸತ್ಯಕ್ಕೆ ದೂರ: ಡಿ.ಸಿ.ಸ್ಪಷ್ಟನೆ.!

WhatsApp
Telegram
Facebook
Twitter
LinkedIn

 

ಚಿತ್ರದುರ್ಗ: ಪ್ರಯಾಗ್ ರಾಜ್ ನಲ್ಲಿ ಜರುಗುತ್ತಿರುವ ಕುಂಭಮೇಳದಲ್ಲಿ   ಇತ್ತೀಚೆಗೆ ಜರುಗಿದ ಕಾಲ್ತುಳಿತದಲ್ಲಿ ಚಿತ್ರದುರ್ಗದ ಓರ್ವರು ಬಲಿಯಾಗಿದ್ದಾರೆ ಎಂಬುದಾಗಿ ಕೆಲ ಮಾಧ್ಯಮ ದಲ್ಲಿ ಸುದ್ದಿ ಬಿತ್ತರವಾಗುತ್ತಿದ್ದು, ಆದರೆ ಇದು ಸತ್ಯಕ್ಕೆ ದೂರವಾದ ಸಂಗತಿಯಾಗಿದೆ ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರು ಸ್ಪಷ್ಟಪಡಿಸಿದ್ದಾರೆ.

ವಾಸ್ತವವಾಗಿ ಆ ವ್ಯಕ್ತಿಯು ಪ್ರಯಾಗ್ ರಾಜ್  ನಿಂದ ಸುಮಾರು 500 km ದೂರದ ಲ್ಲಿರುವ ಝಾನ್ಸಿಯ ರೈಲ್ವೆ ನಿಲ್ದಾಣದಲ್ಲಿ ಅಪರಿಚಿತ ಶವವಾಗಿ ಪತ್ತೆಯಾಗಿದ್ದು, ಈ ವಿಷಯವನ್ನು ಅಲ್ಲಿನ ರೈಲ್ವೆ ನಿಲ್ದಾಣದ ನೋಟಿಸ್ ಬೋರ್ಡ್ ನಲ್ಲಿ ಪ್ರಕಟಿಸಲಾಗಿರುತ್ತದೆ.

ಈ ಕುರಿತು ರೈಲ್ವೆ ಅಧಿಕಾರಿಗಳೊಂದಿಗೆ ಸಮನ್ವಯ ಮಾಡಿಕೊಳ್ಳಲಾಗಿದೆ.  ಹೀಗಾಗಿ ಝಾನ್ದಿ ರೈಲ್ವೆ ನಿಲ್ದಾಣ ದಲ್ಲಿ ಪತ್ತೆಯಾಗಿದ್ದ ಅಪರಿಚಿತ ಶವವನ್ನು ಇಲ್ಲಿನ ಆಸ್ಪತ್ರೆ ಯ ಶವಾಗಾರದಲ್ಲಿ ಇರಿಸಲಾಗಿದ್ದು, ಯಾರಾದರೂ ವಾರಸುದಾರರಿದ್ದಲ್ಲಿ, ಶವ ಗುರುತಿಸಿ, ಪತ್ತೆ ಮಾಡಿಕೊಳ್ಳಬಹುದಾಗಿದೆ.

ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತರಾದ ಪ್ರಕರಣಕ್ಕೂ ಈ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ ಎಂಬುದಾಗಿ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರು ಸ್ಪಷ್ಟಪಡಿಸಿದ್ದಾರೆ.

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon