ಧರ್ಮಸ್ಥಳ ಪ್ರಕರಣ: BJP-JDS ಯಾತ್ರೆಗೆ ಕಾಂಗ್ರೆಸ್‌ನಿಂದಲೂ ಕೌಂಟರ್‌ ಯಾತ್ರೆಗೆ ಪ್ಲ್ಯಾನ್‌..

WhatsApp
Telegram
Facebook
Twitter
LinkedIn

ಮೈಸೂರು: ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರಿಗೆ ಬೆಂಬಲ ವ್ಯಕ್ತಪಡಿಸಲು ಧರ್ಮಸ್ಥಳಕ್ಕೆ ಭೇಟಿ ನೀಡಿರುವ ಬಿಜೆಪಿ ಮತ್ತು ಜೆಡಿಎಸ್ ನಾಯಕರು, ಈ ಮೂಲಕ ರಾಜಕೀಯ ಲಾಭ ಪಡೆಯಲು ಯತ್ನಿಸುತ್ತಿದ್ದು, ಇದರ ಬೆನ್ನಲ್ಲೇ ತಿರುಗೇಟು ನೀಡಲು ಕಾಂಗ್ರೆಸ್ ಮುಂದಾಗಿದೆ.

ಪ್ರಕರಣ ಸಂಬಂಧ ಎಸ್ಐಟಿ ರಚಿಸಿದ ಬಳಿಕ ಧಾರ್ಮಿಕ ಕ್ಷೇತ್ರಕ್ಕೆ ಭೇಟಿ ನೀಡದೆ ದೂರ ಉಳಿದಿದ್ದ ಆಡಳಿತ ಪಕ್ಷದ ನಾಯಕರು, ಇದೀಗ ತಮ್ಮ ಪಕ್ಷವು ಹಿಂದೂ ಧಾರ್ಮಿಕ ಕೇಂದ್ರಗಳನ್ನು ವಿರೋಧಿಸುವುದಿಲ್ಲ ಎಂಬ ಸಂದೇಶ ಸಾರಲು, ಬಿಜೆಪಿ ಹಾಗೂ ಜೆಡಿಎಸ್ ಯಾತ್ರೆಗೆ ಕೌಂಟರ್ ನೀಡಲು ತಾವೂ ಕೂಡ ಯಾತ್ರೆಗೆ ನಡೆಸಲು ಮುಂದಾಗಿದೆ.

ಯೋಜನೆಯ ಭಾಗವಾಗಿ, ಶಾಸಕ ಕೆ. ಹರೀಶ್ ಗೌಡ ನೇತೃತ್ವದಲ್ಲಿ 2,000 ಕ್ಕೂ ಹೆಚ್ಚು ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಸೆಪ್ಟೆಂಬರ್ 3 ರಂದು ‘ಶಾಂತಿ ಯಾತ್ರೆ’ ಅಡಿಯಲ್ಲಿ ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆಂದು ತಿಳಿದುಬಂದಿದೆ.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ನಗರ ಕಾಂಗ್ರೆಸ್ ಸಮಿತಿ (ಚಾಮರಾಜ ವಿಭಾಗ) ಅಧ್ಯಕ್ಷ ರವಿ ಮಂಚೇಗೌಡನಕೊಪ್ಪಲು ಅವರು, ಧರ್ಮಸ್ಥಳಕ್ಕೆ ಬೆಂಬಲ ನೀಡಲು ಆಗಮಿಸುವವರಿಗೆ ಸುಮಾರು 30 ಬಸ್ಸುಗಳು ಮತ್ತು ಹಲವಾರು ಖಾಸಗಿ ವಾಹನಗಳ ಮೂಲಕ ಧರ್ಮಸ್ಥಳ ದೇವಸ್ಥಾನಕ್ಕೆ ಕರೆದೊಯ್ಯಲಾಗುವುದು ಎಂದು ಹೇಳಿದರು.

ಧರ್ಮಸ್ಥಳವು 800 ವರ್ಷಗಳಿಗೂ ಹೆಚ್ಚು ಇತಿಹಾಸ ಹೊಂದಿರುವ ಪವಿತ್ರ ದೇವಾಲಯವಾಗಿದೆ. ದೇಶಾದ್ಯಂತದ ಸಾಕಷ್ಟು ಮಂದಿ ಭಕ್ತರು ಆಶೀರ್ವಾದ ಪಡೆಯಲು ಅಲ್ಲಿಗೆ ಹೋಗುತ್ತಾರೆ. ಇತ್ತೀಚೆಗೆ, ಕೆಲವು ಯೂಟ್ಯೂಬರ್‌ಗಳು ಭಕ್ತರ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡುವ ಅವಹೇಳನಕಾರಿ ಹೇಳಿಕೆಗಳನ್ನು ಮಾಡಿದ್ದಾರೆ. ಸರ್ಕಾರ ಆರಂಭಿಸಿರುವ ಎಸ್‌ಐಟಿ ತನಿಖೆಯನ್ನು ಧರ್ಮಾಧಿಕಾರಿ ಈಗಾಗಲೇ ಸ್ವಾಗತಿಸಿದ್ದಾರೆ. ಇದೀಗ ನಮ್ಮ ಬೆಂಬಲ ವ್ಯಕ್ತಪಡಿಸಲು ನಾವು ಧರ್ಮಸ್ಥಳ ಭೇಟಿಯನ್ನು ಕೈಗೊಳ್ಳುತ್ತಿದ್ದೇವೆಂದು ತಿಳಿಸಿದರು.

ಮೈಸೂರು ಅರಮನೆ ಬಳಿಯ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಿಂದ ‘ಶಾಂತಿ ಯಾತ್ರೆ’ ಬುಧವಾರ ಬೆಳಿಗ್ಗೆ ಪ್ರಾರಂಭವಾಗಲಿದೆ. ಈ ಯಾತ್ರೆಯಲ್ಲಿ ಭಾಗವಹಿಸುವವರು ಧರ್ಮಸ್ಥಳದ ಸ್ವಾಗತ ಕಮಾನಿನಿಂದ ದೇವಸ್ಥಾನಕ್ಕೆ ಪಾದಯಾತ್ರೆ ನಡೆಸಿ, ಹೆಗ್ಗಡೆ ಅವರನ್ನು ಭೇಟಿ ಮಾಡಿ ತಮ್ಮ ಬೆಂಬಲ ವ್ಯಕ್ತಪಡಿಸಲಿದ್ದಾರೆ.

ಮತ ಬ್ಯಾಂಕ್ ರಾಜಕೀಯಕ್ಕಾಗಿ ಬಿಜೆಪಿ ಮತ್ತು ಜೆಡಿಎಸ್ ಧರ್ಮಸ್ಥಳಕ್ಕೆ ಭೇಟಿ ನೀಡುತ್ತಿವೆ, ಆದರೆ ಕಾಂಗ್ರೆಸ್ ಧರ್ಮದ ಪರವಾಗಿ ನಿಂತಿದೆ ಎಂಬುದನ್ನು ತೋರಿಸುವುದು ನಮ್ಮ ಉದ್ದೇಶವಾಗಿದೆ ಎಂದು ತಿಳಿಸಿದರು.

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon